spot_img
spot_img
spot_img
spot_img
spot_img
spot_img
spot_img
spot_img
spot_img
21 C
Belagavi
Wednesday, September 27, 2023
spot_img

ಎಷ್ಟೇ ಕಷ್ಟ ಬಂದರೂ ಐದು ಗ್ಯಾರಂಟಿಗಳನ್ನು ಜಾರಿಮಾಡುತ್ತೆವೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜಾತಿಗಣತಿಯನ್ನು ಪಡೆಯಬೇಡ ಎಂದು ಆಗ ಪುಟ್ಟರಂಗಶೆಟ್ಟಿಯವರಿಗೆ ಹೇಳಿದ್ದೇ ಆಗಿನ ಮುಖ್ಯಮಂತ್ರಿ ಕುಮಾರಸ್ವಾಮಿಯವರು. ಆದರೆ ನಾವು ಜಾತಿಗಣತಿ ವರದಿಯನ್ನು ಸ್ವೀಕರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಾಖಾ ಮಠದ ಭೂಮಿ ಪೂಜೆಯನ್ನು ನೆರವೇರಿಸಿ ಅವರು ಮಾತನಾಡಿದರು. ಎಲ್ಲಾ ಶೋಷಿತ ಸಮುದಾಯಗಳಿಗೂ ಮಹಾಸಂಸ್ಥಾನ ಆಗಬೇಕು ಎಂಬ ಉದ್ದೇಶದಿಂದ ಕಾಗಿನೆಲೆ ಮಹಾಸಂಸ್ಥಾನವನ್ನು ಸ್ಥಾಪಿಸಲಾಗಿದೆ. ಆದ್ದರಿಂದ ಇದು ಕೇವಲ ಒಂದು ಜಾತಿ ಅಥವಾ ಸಮಾಜದ ಮಠವಲ್ಲ, ಎಲ್ಲಾ ಶೋಷಿತ ಸಮಾಜಗಳಿಗೆ ಸೇರಿದ ಮಹಾ ಸಂಸ್ಥಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಶೋಷಿತ ಸಮುದಾಯಗಳಿಗೆ ಧ್ವನಿ ಆಗುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಮಾಡಿ ಸಮುದಾಯವನ್ನು ಒಟ್ಟಾಗಿಸಿ ಮಹಾಸಂಸ್ಥಾನಕ್ಕೆ ನಾಂದಿ ಹಾಡಲಾಯಿತು. ಮೊದಲ ಸ್ವಾಮೀಜಿ ತಾರಕಾನಂದಪುರಿ ಶ್ರೀಗಳ ಸಾನ್ನಿಧ್ಯದಲ್ಲಿ ಸಾಮಾಜಿಕ ಚಟುವಟಿಕೆ ಮಾಡಿಕೊಂಡು ಬರುತ್ತಿತ್ತು. ಈಗ ನಿರಂಜನಾನಂದಪುರಿ ಶ್ರೀಗಳ ಸಾನ್ನಿಧ್ಯದಲ್ಲಿ ಸಮಾಜಮುಖಿ ಕಾರ್ಯಗಳು ನಡೆಯುತ್ತಿವೆ ಎಂದಿದ್ದಾರೆ.
ನಾವು ಚುನಾವಣೆ ವೇಳೆ ನೀಡಿರುವ 5 ಗ್ಯಾರಂಟಿಗಳನ್ನು ಎಷ್ಟೇ ಕಷ್ಟ ಬಂದರೂ ಜಾರಿ ಮಾಡುತ್ತೇವೆ. ಯಾರೇ ಆಡಿಕೊಂಡರೂ ಈ ವರ್ಷದ ಬಜೆಟ್‍ನಲ್ಲೇ 5 ಘೋಷಣೆಗಳಿಗೂ ಹಣ ಕೊಡುತ್ತೇವೆ. ನಮ್ಮ ಘೋಷಣೆಗಳು ಜಾತಿ-ಧರ್ಮ ಮೀರಿರುವಂತಹ ಘೋಷಣೆಗಳಾಗಿದೆ ಎಂದರು.

Related News

ಕೆಳಮಟ್ಟದಲ್ಲಿ ನೋಡುತ್ತಿದ್ದ ಖಾತೆಯನ್ನು ಈಗ ವಿಶ್ವವೇ ನೋಡುವಂತಾಗಿದೆ – ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...

ಜಲಜೀವನ್ ಮಿಷನ್ ಯೋಜನೆಗೆ ಚನ್ನರಾಜ ಹಟ್ಟಿಹೊಳಿ ಚಾಲನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು‌ ನೀಡಿದರು. ತಂದನಂತರ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -