spot_img
spot_img
spot_img
32.1 C
Belagavi
Tuesday, June 6, 2023
spot_img

ಮರಾಠಿ ಭವನಕ್ಕೆ 25 ಲಕ್ಷ ರೂ. ಅನುದಾನ ಭರವಸೆ : ಎಂಎಲ್ ಸಿ ಹುಕ್ಕೇರಿ ವಿರುದ್ಧ ಆಕ್ರೋಶ 

ಬೆಳಗಾವಿ : ಮರಾಠಿ ಭವನ ನಿರ್ಮಾಣಕ್ಕೆ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ 25 ಲಕ್ಷ ‌ರೂಪಾಯಿ ಅನುದಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ನಡೆದ ಮರಾಠಿ ಸಾಹಿತ್ಯ ಸಮ್ಮೇಳನದಲ್ಲಿ ಭಾಗಿಯಾದ ಪ್ರಕಾಶ್ ಹುಕ್ಕೇರಿ, ನಿಮ್ಮೆಲ್ಲರ ಆಶೀರ್ವಾದದಿಂದ ಮತ್ತೆ ಆರು ವರ್ಷ ಸೇವೆ ಮಾಡುವ ಅವಕಾಶ ಕೊಟ್ಟಿದ್ದೀರಿ. ಮರಾಠಿ ಭವನ ಕಟ್ಟಲು ಸಹಾಯ ಮಾಡ್ತೀನಿ. ಉದ್ಘಾಟನೆಗೆ ಬೇಕಾದರೆ ಕೊಲ್ಲಾಪುರ ಮಹಾರಾಜರನ್ನು ಕರೆಯಿಸಿ. ಗಡಿಯಲ್ಲಿ ಮರಾಠಿ ಸಾಹಿತ್ಯ ಸಮ್ಮೇಳನ ಅವಶ್ಯಕತೆ ಇದೆ. ಇಲ್ಲಿ ಯಾವ ಭಾಷಾ ಸಮಸ್ಯೆಯೂ ಇಲ್ಲ, ಎಲ್ಲರೂ ಅಣ್ಣತಮ್ಮಂದಿರ ಹಾಗೆ ಇದ್ದೇವೆ ಎಂದೂ ಅವರು ಹೇಳಿದ್ದಾರೆ.

ಇತ್ತೀಚೆಗೆ ಕೊಲ್ಹಾಪುರದ ಕನ್ನೇರಿ ಮಠದಲ್ಲಿ ಕನ್ನಡ ಭವನ ನಿರ್ಮಾಣ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಿದ್ದರು. ನೀವು ಕನ್ನಡ ಭವನ ಕಟ್ಟಿದರೆ ಅದರ ಬೋರ್ಡ್ ಕಿತ್ತೊಗೆಯುತ್ತೇವೆ ಎಂದು ಸ್ಥಳೀಯ ಮರಾಠಿ ಪುಂಡರು ಆವಾಜ್‌ ಹಾಕಿದ್ದರು. ಈಗ ಅದೇ ಕರ್ನಾಟಕದ ಗಡಿಯಲ್ಲಿ ಮರಾಠಿ ಭವನ ನಿರ್ಮಾಣ ಮಾಡಲು ಪ್ರಕಾಶ್ ಹುಕ್ಕೇರಿ ಮುಂದಾಗಿದ್ದಾರೆ.

ಎಂಎಲ್‌ಸಿ ಪ್ರಕಾಶ್ ಹುಕ್ಕೇರಿ ಮರಾಠಿ ಪ್ರೇಮಕ್ಕೆ ಕನ್ನಡಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಸ್ ಮೇಲೆ ಕಲ್ಲು ತೂರಿ ಮಸಿ ಬಳಿದಾಗ ತುಟಿ ಬಿಚ್ಚದ ನಾಯಕರು ಈಗ ಮರಾಠಿಗರ ಓಲೈಕೆಗೆ ನಿಂತು ವೋಟ್ ಪಾಲಿಟಿಕ್ಸ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

Related News

ಬೆಳಗಾವಿಯಲ್ಲಿ ಬ್ರಿಡ್ಜ್ ಮೇಲಿಂದ ಉರುಳಿಬಿದ್ದ ಟ್ಯಾಂಕರ್ ಅದೃಷ್ಟವಶಾತ್ ಬದುಕುಳಿದ ಚಾಲಕ

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್ ವಾಹನವೊಂದು ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಮೇಲಿಂದ ಬಿದ್ದಿರುವ ಘಟನೆ ಎಂ.ಕೆ ಹುಬ್ಬಳ್ಳಿ ಸಮೀಪದಲ್ಲಿ ನಡೆದಿದೆ. ಅಪಘಾತದಲ್ಲಿ ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮಹಾರಾಷ್ಟ್ರ ಮೂಲದ ರಾಮದಾಸ್...

ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ ಐವರ ಸಾವು

ಯಾದಗಿರಿ: ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಯಾದಗಿರಿ ತಾಲೂಕಿನ ಬಳಿಚಕ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150 (ಚಿ) ನಲ್ಲಿ ನಡೆದಿದೆ. ಮುನೀರ್(40), ನಯಾಮತ್ (40), ಮುದ್ದತ್ ಶಿರ್ (12), ರಮಿಜಾ ಬೇಗಂ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -