ಬೆಳಗಾವಿ: ಹಿಡಲಗಾ ಜೈಲಿನಲ್ಲಿ ಇದ್ದ ವಿಚಾರಣಾದೀನ ಕೈದಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಚ್ಚನಕೇರಿ ಗ್ರಾಮದ ಮಂಜುನಾಥ ನಾಯ್ಕರ (20) ಆತ್ಮಹತ್ಯೆ ಮಾಡಿಕೊಂಡ ಕೈದಿ.
ಮೂರು ತಿಂಗಳ ಹಿಂದೆ ಪೋಕ್ಸೊ ಪ್ರಕರಣದಲ್ಲಿ ಹಿಡಲಗಾ ಜೈಲು ಸೇರಿದ್ದ ಮಂಜುನಾಥ, ಕ್ವಾರಂಟೈನ್ ಕೊಠಡಿಯಲ್ಲಿ ಬೆಡ್ಶೀಟ್ನಿಂದ ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.