ಕರ್ನಾಟಕ ಇಡೀ ದೇಶಕ್ಕೆ ದಿಕ್ಸೂಚಿಯಾಗಿದೆ. ನಮ್ಮ ಗ್ಯಾರಂಟಿ ಘೋಷಣೆ ವೇಳೆ ಕೇಂದ್ರ ಸರ್ಕಾರ ಟೀಕೆ ಮಾಡಿತ್ತು. ಆದ್ರೆ ನಾವಿಂದು ನುಡಿದಂತೆ ನಡೆದಿದ್ದೇವೆ. ಕರ್ನಾಟಕರ ನಮ್ಮ ತಾಯಂದಿರು, ಅಕ್ಕ-ತಂಗಿಯರು ಉಚಿತವಾಗಿ ಕರ್ನಾಟಕ ಸುತ್ತಾಡುತ್ತಿದ್ದಾರೆ. ಉಚಿತ ವಿದ್ಯುತ್ ನೀಡಲಾಗಿದೆ, ಇಂದು ಒಂದು ಕೋಟಿಗೂ ಹೆಚ್ಚು ಮಹಿಳೆಯರ ಖಾತೆಯಲ್ಲಿ ಎರಡು ಸಾವಿರ ಹಣ ಇದೆ. ಭಾರತ ದೇಶದ ಅತಿ ದೊಡ್ಡ ಹಣ ವರ್ಗಾವಣೆಯನ್ನು ನಮ್ಮ ಸರ್ಕಾರ ಮಾಡಿದೆ. 2 ಸಾವಿರ ಖಾತೆಗೆ ಹಣ ಹಾಗುವ ಯೋಜನೆ ಚಿಕ್ಕ ಯೋಜನೆ ಅಲ್ಲ. ಇದರಿಂದ ಮಹಿಳೆಯರು ಹಣ ಸೇವ್ ಮಾಡಬಹುದು, ಮಕ್ಕಳಿಗೆ ಪುಸ್ತಕ ಕೊಡಿಸಬಹುದು. ಇದರ ಸಂಪೂರ್ಣ ಉಪಯೋಗ ಮಹಿಳೆಯರ ಮೇಲಿದೆ.
ನಾನಿವತ್ತು ತುಂಬಾ ಖುಷಿಯಾಗಿದ್ದೇನೆ. ಕಾಂಗ್ರೆಸ್ ಸರ್ಕಾರ 100 ದಿನ ಪೂರೈಸಿದೆ. ನಾವು ಕೊಟ್ಟ ಭರವಸೆಗಳನ್ನು ಈಡೇರಿಸಿದ್ದೇವೆ. ನನಗಿವತ್ತು ನನ್ನ ತಂಗಿ ರಾಕಿ ಕಟ್ಟಿದ್ದಾಳೆ. ಈ ಶುಭ ದಿನದಂದು ನಾವು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದ್ದೇವೆ. ಮನೆಯ ಯಜಮಾನಿ ಮಹಿಳೆಯರ ಖಾತೆಗೆ 2 ಸಾವಿರ ಹಣ ಜಮೆ ಮಾಡಿದ್ಧೇವೆ.
ಕಾಂಗ್ರಸ್ನ 5ರಲ್ಲಿ 4 ಯೋಜನೆಗಳು ಮಹಿಳೆಯರ ಸಬಲೀಕರಣಕ್ಕೆ ಜಾರಿ ಮಾಡಿದ್ದೇವೆ. ಭಾರತ್ ಜೋಡೆ ಯಾತ್ರೆ ವೇಳೆ ನಾನು ಸಾವಿರಾರು ಮಹಿಳೆಯರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದೇನೆ. ಈ ವೇಳೆ ನನಗೊಂದು ವಿಷಯ ಮನಸ್ಸಿಗೆ ತಾಕಿದೆ. ಬೆಲೆ ಏರಿಕೆ ಏಟು ನಮಗೆ ಬರೆ ಎಳೆದಿದೆ ಎಂದಿರಿ. ಇವತ್ತು ಪೆಟ್ರೋಲ್, ಟೀಸೆಲ್, ಅನಿಲ ಬೆಲೆ ಏರಿಕೆ ಬೀಳೋದು ಮಹಿಳೆಯರಿಗೆ. ಯಾವ ರೀತಿ ಬೇರು ಇಲ್ಲದೆ ಮರ ನಿಲ್ಲಲು ಸಾಧ್ಯವಿಲ್ಲವು ಅದೇ ರೀತಿ ಮಹಿಳೆಯರಿಲ್ಲದೆ ಕರ್ನಾಟಕ ನಿಲ್ಲಲು ಸಾಧ್ಯವಿಲ್ಲ. ಮಹಿಳೆಯರು ಬೇರು. ಬೇರುಗಳು ಯಾವ ರೀತಿ ಕಾಣುವುದಿಲ್ಲವೋ ಹಾಗೇ ಮಹಿಳೆಯರು ಕಾಣುತ್ತಿಲ್ಲ ಎಂದರು.