ಬೆಂಗಳೂರು: ಶಿವಮೊಗ್ಗ ವಿಮಾನ ನಿಲ್ದಾಣವನ್ನು ರಾಜ್ಯದಿಂದಲೇ ನಿರ್ವಹಣೆ ಮಾಡಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಎಲ್ಲ ವಿಮಾನ ನಿಲ್ದಾಣಗಳನ್ನು ರಾಜ್ಯದಿಂದಲೇ ನಿರ್ವಹಣೆ ಮಾಡಲಾಗುತ್ತದೆ ಎಂದು ಸಚಿವ ಎಂಬಿ ಪಾಟೋಲ್ ಹೇಳಿದ್ದಾರೆ.
ವಿಮಾನ ನಿಲ್ದಾಣಗಳನ್ನು ನಾವು ಈ ಹಿಂದೆ ಏರ್ ಪೋರ್ಟ್ ಅಥಾರಿಟಿಗೆ ನೀಡುತ್ತಿದ್ದೇವೆ. ವಿಮಾನ ನಿಲ್ದಾಣ ಭೂಮಿ ಕೂಡ ಅಥಾರಿಟಿ ಹೆಸರಿಗೆ ಟ್ರಾನ್ಸಫರ್ ಆಗುತ್ತಿತ್ತು. ಇಷ್ಟೆಲ್ಲ ಆದರೂ ಕೂಡ ವಿಮಾನ ನಿಲ್ದಾಣಗಳ ಮೇಲೆ ನಮ್ಮ ಹಿಡಿತ ಇರುತ್ತಿರಲಿಲ್ಲ. ಇದೀಗ ಶಿವಮೊಗ್ಗ ವಿಮಾನ ನಿಲ್ದಾಣವನ್ನು ರಾಜ್ಯದಿಂದಲೇ ನಿರ್ವಹಣೆ ಮಾಡುತ್ತಿದೆ. ನಾವೇ ಏರ್ ಲೈನ್ಸ್ ಮಾಡುವ ಬಗ್ಗೆಯೂ ಚಿಂತನೆ ನಡೆಸಿದ್ದೇವೆ. ಮುಂದೆ ಎಲ್ಲ ವಿಮಾನ ನಿಲ್ದಾಣಗಳನ್ನು ನಾವೇ ನಿರ್ವಹಣೆ ಮಾಡುವ ಬಗ್ಗೆ ನಿರ್ಧರಿಸಿದ್ದೇವೆ. ವಿಜಯಪುರ, ಕಾರವಾರ, ಬೀದರ್ ಸೇರಿ ಮುಂದೆ ಎಲ್ಲ ವಿಮಾನ ನಿಲ್ದಾಣಗಳನ್ನು ನಾವೇ ನಿರ್ವಹಣೆ ಮಾಡುತ್ತೇವೆ. ತದಡಿಯಲ್ಲಿ ಸೂಕ್ಷ್ಮ ವಲಯ ಆಗಿದ್ದರಿಂದ ಬಂದರು ನಿರ್ಮಾಣ ಆಗಿರಲಿಲ್ಲ ಎಂದರು.
ಬೆಳಗಾವಿ: 10 ದಿನಗಳ ಗಣಪತಿ ಭಕ್ತರ ಆತಿತ್ಯವನ್ನು ಸ್ವೀಕರಿಸಿ ಇಂದು ನಿರ್ಗಮನ ವಾಗುತ್ತಿದ್ದಾನೆ. ಗಣಪತಿ ಭಕ್ತರು ಹತ್ತು ದಿನಗಳವರೆಗೆ ವಿವಿಧ ಸೇವೆ ಸಲ್ಲಿಸಿ ಗಣಪತಿಯ ಅನುಗ್ರಹಕ್ಕೆ ಪಾತ್ರರಾಗಿರುತ್ತಾರೆ. ಬೆಳಗಾವಿ ನಗರಕ್ಕೆ ಗಣಪತಿ ಆಗಮನ...
ಬೆಳಗಾವಿ: ಭಾರತಕ್ಕೆ ನಾಲ್ವರು ಒಲಂಪಿಕ್ ಹಾಕಿ ಆಟಗಾರರನ್ನು ನೀಡಿದ್ದು, ಕರ್ನಾಟಕ ಸರಕಾರ ಬೆಳಗಾವಿಗೆ ಅಂತರಾಷ್ಟ್ರೀಯ ಗುಣಮಟ್ಟದ ಹಾಕಿ ಮೈದಾನವನ್ನು ಇನ್ನೂ ನೀಡಿಲ್ಲ, ಅದಕ್ಕಾಗಿ ಜಿಲ್ಲಾಡಳಿತ ಕೂಡಲೇ ಬೆಳಗಾವಿ ಹಾಕಿ ಸಂಸ್ಥೆಯ ಆಸ್ಟ್ರೋಟರ್ಫ್ ಮೈದಾನದ...