spot_img
spot_img
spot_img
spot_img
spot_img
spot_img
spot_img
spot_img
spot_img
26.1 C
Belagavi
Friday, September 22, 2023
spot_img

ತಲಾ 15 ಕೆಜಿ ಅಕ್ಕಿ ಕೊಡಿ ಆಗದಿದ್ದರೆ ಅಧಿಕಾರ ಬಿಟ್ಟು ತೊಲಗಿ: ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು: ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿ ಜೊತೆ ನೀವು ಘೋಷಿಸಿರುವಂತೆ 10 ಕೆಜಿ ಅಕ್ಕಿ ಕೊಡಿ. ಅಂದರೆ ಒಬ್ಬರಿಗೆ ತಲಾ 15 ಕೆಜಿ ಅಕ್ಕಿ ಕೊಡಬೇಕು. ಅಕ್ಕಿ ಕೊಡಲು ಆಗದಿದ್ದರೆ ಅಧಿಕಾರ ಬಿಟ್ಟು ತೊಲಗಿ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ನಡೆದ ಯೋಗ ದಿನಾಚರಣೆಯ ಬಳಿಕ ಮಾತನಾಡಿದ ಅವರು, ಮೋದಿ ಕೊಡುತ್ತಿರುವ ಅಕ್ಕಿ ಸೇರಿ ನೀವು 10 ಕೆಜಿ ಅಕ್ಕಿ ಕೊಡೋದಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮರ್ಯಾದೆ ಇಲ್ಲದ ಬೇಜವಾಬ್ದಾರಿ ಮುಖ್ಯಮಂತ್ರಿ. ಚುನಾವಣೆಗೂ ಮುನ್ನ ಗ್ಯಾರಂಟಿಗಳನ್ನು ಘೋಷಿಸುವಾಗ ನಿಮ್ಮ ತಲೆಯಲ್ಲಿ ಏನಿತ್ತು? ಮೆದುಳು ಇರಲಿಲ್ಲವಾ, ಸಗಣಿ ತುಂಬಿತ್ತಾ ಎಂದು ಹರಿಹಾಯ್ದರು.

ಒಂದೇ ತಿಂಗಳಿಗೆ ರಾಜ್ಯದಲ್ಲಿ ಅರಾಜಕತೆ ತುಂಬಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಅವರು, ಕಾಂಗ್ರೆಸ್ಸಿಗರಿಗೆ ಮಾನ-ಮರ್ಯಾದೆ ಇಲ್ಲ. ವೋಟು ಹಾಕಿಸಿಕೊಂಡು ಜನರಿಗೆ ಮೋಸ ಮಾಡಿದ್ದೀರಾ. ಸಿದ್ದರಾಮಯ್ಯನವರೇ ನಿಮ್ಮ ಬೇಜವಾಬ್ದಾರಿ ಹೇಳಿಕೆಗಳನ್ನು ವಾಪಸ್ಸು ತೆಗೆದುಕೊಳ್ಳಿ. ರಾಜ್ಯ ಸರ್ಕಾರ ಒಂದು ಬೇಜವಾಬ್ದಾರಿಯ ಸರ್ಕಾರ. ಚುನಾವಣೆಯನ್ನು ಗೆಲ್ಲುವುದಕ್ಕೆ ಇಲ್ಲಸಲ್ಲದ ಭರವಸೆ, ಆಸೆ ತೋರಿಸಿದ್ದರು ಎಂದು ವಾಗ್ದಾಳಿ ನಡೆಸಿದರು.

Related News

ಬೆಳಗಾವಿ ಜಿಲ್ಲೆಯಲ್ಲಿ 14 ಗ್ರಾ.ಪಂಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ

ಬೆಳಗಾವಿ : 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೆಳಗಾವಿ ಜಿಲ್ಲೆಯ 14 ಗ್ರಾಮ ಪಂಚಾಯತಿಗಳು ಆಯ್ಕೆಯಾಗಿದ್ದು ಜಿಲ್ಲಾ ಪಂಚಾಯತ್ ಕಾರ್ಯಾಲಯ ಈ ಕುರಿತು ಆದೇಶ ನೀಡಿದೆ. ಖಾನಾಪುರ – ಬೇಕವಾಡ, ಕಿತ್ತೂರು –...

ಚಂದ್ರಯಾನ-3 ಮೇಲೆ ಇಸ್ರೋ ಕಣ್ಣು ಇಂದು ಎಚ್ಚೆತ್ತುಕ್ಕೊಳ್ಳುತ್ತಾ ಲ್ಯಾಂಡರ್ ಮತ್ತು ರೋವರ್

ಬೆಂಗಳೂರು: ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ಬಳಿಕ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಮತ್ತೊಂದು ಸಾಹಸಕ್ಕೆ ಮುಂದಾಗಿದ್ದು 15 ದಿನಗಳ ಹಿಂದೆ ಚಂದ್ರನಲ್ಲಿ ರಾತ್ರಿಯಾದ ಕಾರಣ ನಿದ್ರೆಗೆ ಜಾರಿಸಿದ್ದ ವಿಕ್ರಮ್ ಲ್ಯಾಂಡರ್ ಮತ್ತು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -