SSLCಯಲ್ಲಿ ರಾಜ್ಯಕ್ಕೆ ಪ್ರಥಮ ಬಂದ ಅಂಕಿತಾಗೆ ಜಿ.ಪಂ ಸಿಇಓ ಅಭಿನಂದನೆ

May 9, 2024 - 13:06
 95
Google  News Join WhatsApp Join Telegram View ePaper

SSLCಯಲ್ಲಿ ರಾಜ್ಯಕ್ಕೆ ಪ್ರಥಮ ಬಂದ ಅಂಕಿತಾಗೆ ಜಿ.ಪಂ ಸಿಇಓ ಅಭಿನಂದನೆ

Panchayat Swaraj Samachar News Desk.

ಬಾಗಲಕೋಟೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್ ಆಗಿರುವ ಬಾಗಲಕೋಟೆ ಜಿಲ್ಲೆಯ ಅಂಕಿತಾ ಬಸಪ್ಪ ಕೊಣ್ಣುರ್ ಅವರ ಸಾಧನೆಗೆ ಜಿಲ್ಲಾ ಪಂಚಾಯಿತಿ ಸಿಇಓ ಶಶಿಧರ ಕುರೇರ್ ಅಭಿನಂದನೆ ಸಲ್ಲಿಸಿದ್ದಾರೆ.

ಈ ಬಗ್ಗೆ ದೂರವಾಣಿಯಲ್ಲಿ ಪ್ರತಿಕ್ರಿಯೆ ನೀಡಿದ ಸಿಇಓ ಕುರೇರ್, ಇಡೀ ರಾಜ್ಯವೇ ಖುಷಿ ಪಡುವ ಸಾಧನೆಯನ್ನು ನಮ್ಮ ಜಿಲ್ಲೆಯ ಅಂಕಿತಾ ಕೊಣ್ಣುರ್ ಮಾಡಿದ್ದಾರೆ. ಸಣ್ಣ ರೈತ ಕುಟುಂಬದ ಅಂಕಿತಾ, ಸರ್ಕಾರಿ ಶಾಲೆಯಲ್ಲಿ ಓದಿ, ರಾಜ್ಯದ ಎಲ್ಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೂ ಮಾದರಿ ಆಗುವ ಸಾಧನೆ ಮಾಡಿದ್ದಾರೆ. ಬಾಲಕಿಗೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ತುಂಬು ಹೃದಯದ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.

ಹಾಗೆಯೇ ಬಾಗಲಕೋಟೆ ಜಿಲ್ಲೆ ಕಳೆದ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ರಾಜ್ಯದಲ್ಲಿ 24ನೇ ಸ್ಥಾನ ಪಡೆದಿತ್ತು. ಈ ಬಾರಿ 13ನೇ ಸ್ಥಾನಕ್ಕೆ ಬಂದಿದೆ. 11 ಸ್ಥಾನ ಪ್ರಗತಿಯಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು, ಇಲಾಖೆ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುವೆ ಎಂದು ತಿಳಿಸಿದ್ದಾರೆ. 

Google News Join Facebook Live 24/7 Help Desk

Tags: