spot_img
spot_img
spot_img
36.1 C
Belagavi
Tuesday, June 6, 2023
spot_img

ರಾಜ್ಯದ ಪ್ರತಿ ತಾಲೂಕಿನಲ್ಲಿ ಎರಡು ಪಿಎಂ ಶ್ರೀ ಶಾಲೆಗಳ ಆರಂಭ

ಬೆಂಗಳೂರು: ರಾಜ್ಯದ ಪ್ರತಿ ತಾಲೂಕಿನಲ್ಲಿ ಎರಡು ಪಿಎಂ ಶ್ರೀ ಶಾಲೆಗಳನ್ನು ಆರಂಭಿಸಲು ಉದ್ದೇಶಿಲಾಗಿದೆ ಎಂಬುದಾಗಿ ಸಮಗ್ರ ಶಿಕ್ಷಣ ಕರ್ನಾಟ ತಿಳಿಸಿದೆ.

ಈ ಕುರಿತಂತೆ ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರು, ಪಂಚಾಯತ್ ರಾಜ್ ಇಲಾಖೆಯ ಆಯುಕ್ತರಿಗೆ ಪತ್ರವನ್ನು ಬರೆದಿದ್ದಾರೆ. ಅದರಲ್ಲಿ ಕೇಂದ್ರ ಸಚಿವ ಸಂಪುಟವು ಹೊಸ ಯೋಜನೆ PM SHRi – PM School For Rising India ಗೆ ಸಂಪುಟದ ಅನುಮೋದನೆ ದೊರೆತಿದೆ.

ದೇಶಾದ್ಯಂತ ಎನ್ ಪಿಇ 2020ರ ಎಲ್ಲಾ ಘಟಕಗಳನ್ನು ಅನುಷ್ಛಾನಗೊಳಿಸಲು 14,500ಕ್ಕೂ ಹೆಚ್ಚು ಶಾಲೆಗಳನ್ನು ಪಿಎಂ ಶ್ರೀ ಶಾಲೆಗಳಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದಿದ್ದಾರೆ.

ಯು-ಡೈಸ್ ಕೋಡ್ ಹೊಂದಿರುವ ಸಮಗ್ರ ಶಿಕ್ಷಣ ಕರ್ನಾಟಕ ಅಡಿಯಲ್ಲಿ ಬರುವ ಸರ್ಕಾರಿ ಪ್ರಾಥಮಿಕ ಶಾಲೆಗಳು ಹಾಗೂ ಮಾಧ್ಯಮಿಕ, ಹಿರಿಯ ಮಾಧ್ಯಮಿಕ ಶಾಲೆಗಳನ್ನು ಈ ಯೋಜನೆಯಡಿ ಆಯ್ಕೆಗೆ ಪರಿಗಣಿಸಲಾಗುತ್ತದೆ ಎಂದು ಹೇಳಿದ್ದಾರೆ.

ಈ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಪ್ರತಿ ತಾಲೂಕಿಗೆ ಎರಡರಂತೆ Challenge Mode ನಲ್ಲಿ PM SHRI ಶಾಲೆಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ. ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು , ಈಗಾಗಲೇ ಆಯ್ಕೆಗೊಂಡ ಶಾಲೆಗಳಿಗೆ ಆಯಾಯಾ ಗ್ರಾಮ ಪಂಚಾಯ್ತಿಯಿಂದ ಒಪ್ಪಿಗೆ ಪತ್ರ ನೀಡಬೇಕಿದೆ.

Related News

ಸ್ಲೀಪರ್ ಕೋಚ್ ಬಸ್ಸಿನಲ್ಲಿ ವಿಷ ಕುಡಿದು ಪ್ರೇಮಿಗಳು ಪ್ರಿಯತಮೆ ಸಾವು

ಹಾವೇರಿ: ಸ್ಲೀಪರ್ ಕೋಚ್ ಬಸ್ಸಿ ನಲ್ಲಿ ವಿಷ ಕುಡಿದು ಪ್ರೇಮಿಗಳು ಮಲಗಿದ್ದು, ಯುವತಿ ಮೃತಪಟ್ಟ ಘಟನೆ ರಾಣೆಬೆನ್ನೂರು ನಗರದ ಚಳಗೇರಿ ಟೋಲ್ ಬಳಿ ಇರುವ ಗ್ರೀನ್ ಪ್ಯಾಲೇಸ್ ಹೋಟೆಲ್ ಬಳಿ ನಡೆದಿದೆ. ಹೇಮಾ ರಾಮಕೃಷ್ಣಪ್ಪ (20)...

ಎಲ್ಲ ನಾಯಕರ ಸಹಮತದ ಆಧಾರದ ಮೇಲೆ ಬೆಳಗಾವಿ ಜಿಲ್ಲಾ ವಿಭಜನೆ ಆಗಬೇಕು

ಬೆಳಗಾವಿ: ಅಭಿವೃದ್ಧಿ ದೃಷ್ಟಿಯಿಂದ ಅಖಂಡ ಬೆಳಗಾವಿ ಜಿಲ್ಲಾ ವಿಭಜನೆ ಆಗಬೇಕು. ಆದರೆ ಜಿಲ್ಲೆಯ ಎಲ್ಲ ನಾಯಕರ ಸಹಮತದ ಆಧಾರದ ಮೇಲೆ ಜಿಲ್ಲಾ ವಿಭಜನೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -