spot_img
spot_img
spot_img
32.1 C
Belagavi
Tuesday, June 6, 2023
spot_img

ಬೈಲಹೊಂಗಲದ ವಸತಿ ನಿಲಯದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

ಬೆಳಗಾವಿ: ವಸತಿ ನಿಲಯದಲ್ಲಿ ಕಾಲೇಜು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ‌ಬೈಲಹೊಂಗಲ ಪಟ್ಟಣದ ಇಂದಿರಾ ನಗರದಲ್ಲಿ ನಡೆದಿದೆ.

ಬೈಲಹೊಂಗಲ ತಾಲೂಕಿನ ಕೊಡ್ಡಿವಾಡ ಗ್ರಾಮದ ಪರುಶರಾಮ ಕೋನೇರಿ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಸತಿ ನಿಲಯದಲ್ಲಿ ಇತರೆ ವಿದ್ಯಾರ್ಥಿಗಳು ಕಾಲೇಜಿಗೆ ಹೋದ ಬಳಿಕ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳಾಗಿದೆ ಎನ್ನಲಾಗುತ್ತಿದೆ.

ಸ್ಥಳಕ್ಕೆ ಬೈಲಹೊಂಗಲ ಪೊಲೀಸರು ಭೇಟಿ ನೀಡಿದ್ದು, ಮರಣೋತ್ತರ ‌ಪರೀಕ್ಷೆಗೆ ವಿದ್ಯಾರ್ಥಿ ಶವವನ್ನು ತಾಲೂಕಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ಬೈಲಹೊಂಗಲ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related News

ಬೆಳಗಾವಿಯಲ್ಲಿ ಬ್ರಿಡ್ಜ್ ಮೇಲಿಂದ ಉರುಳಿಬಿದ್ದ ಟ್ಯಾಂಕರ್ ಅದೃಷ್ಟವಶಾತ್ ಬದುಕುಳಿದ ಚಾಲಕ

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್ ವಾಹನವೊಂದು ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಮೇಲಿಂದ ಬಿದ್ದಿರುವ ಘಟನೆ ಎಂ.ಕೆ ಹುಬ್ಬಳ್ಳಿ ಸಮೀಪದಲ್ಲಿ ನಡೆದಿದೆ. ಅಪಘಾತದಲ್ಲಿ ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮಹಾರಾಷ್ಟ್ರ ಮೂಲದ ರಾಮದಾಸ್...

ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ ಐವರ ಸಾವು

ಯಾದಗಿರಿ: ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಯಾದಗಿರಿ ತಾಲೂಕಿನ ಬಳಿಚಕ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150 (ಚಿ) ನಲ್ಲಿ ನಡೆದಿದೆ. ಮುನೀರ್(40), ನಯಾಮತ್ (40), ಮುದ್ದತ್ ಶಿರ್ (12), ರಮಿಜಾ ಬೇಗಂ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -