spot_img
spot_img
spot_img
24 C
Belagavi
Thursday, June 1, 2023
spot_img

ಕುಸಿದು ಬಿದ್ದ ಗ್ರಾಪಂ ನೌಕರರ ಪ್ರತಿಭಟನೆ ನಡೆಸುತ್ತಿದ್ದ ಶಾಮಿಯಾನಾ 

ಬೆಳಗಾವಿ: ಸುವರ್ಣಸೌಧದಲ್ಲಿ ವಿಧಾನ ಮಂಡಲ ಅಧಿವೇಶನ ಆರಂಭಗೊಂಡ ನಡುವೆಯೇ ಹೊರಗಡೆ ಹಲವು ಹೋರಾಟಗಳ ಸರಣಿಯೇ ಆರಂಭಗೊಂಡಿದೆ.

ಪ್ರತಿಭಟನೆ ಮಾಡುವವರಿಗಾಗಿಯೇ ಒಂದು ಶಾಮಿಯಾನಾ ಹಾಕಲಾಗಿದ್ದು, ಗಾಳಿಯ ರಭಸಕ್ಕೆ ಅದು ಕುಸಿದು ಬಿದ್ದು ಭಾರಿ ಅವಾಂತರವೇ ಸಂಭವಿಸಿತು. ಆದರೆ, ಯಾವುದೇ ಅಪಾಯವಾಗಿಲ್ಲ.

ಕೊಂಡಸಕೊಪ್ಪ ಎಂಬಲ್ಲಿ ಪ್ರತಿಭಟನೆಗಾಗಿ ಶಾಮಿಯಾನ ಹಾಕಲಾಗಿದ್ದು, ಅಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಪಂಚಾಯತ್ ನೌಕರರ ಸಂಘದಿಂದ ಪ್ರತಿಭಟನೆ ನಡೆಯುತ್ತಿತ್ತು.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ವಿವಿದೆಡೆಗಳಿಂದ ಆಗಮಿಸಿರುವ ಮೂರು ಸಾವಿರಕ್ಕೂ ಅಧಿಕ ಗ್ರಾಮ ಪಂಚಾಯತ್ ನೌಕರರು ಧರಣಿಯಲ್ಲಿ ಭಾಗಿಯಾಗಿದ್ದರು.

ಈ ವೇಳೆ ಗ್ರಾಮ ಪಂಚಾಯತ್ ನೌಕರರ ಧರಣಿ ವೇಳೆ , ಗಾಳಿಯ ರಭಸಕ್ಕೆ ಟೆಂಟ್ ಕುಸಿದುಬಿದ್ದಿದೆ. ಕೂಡಲೇ ಎಚ್ಚೆತ್ತುಕೊಂಡ ಧರಣಿ ನಿರತರು ಹೊರಗೆ ಓಡಿ ಬಂದಿದ್ದರಿಂದ ಅನಾಹುತ ತಪ್ಪಿದೆ.

Related News

ಶೆಟ್ಟರ್​, ಲಕ್ಷ್ಮಣ್ ಸವದಿ ನಮ್ಮ ನಾಯಕರು ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ

ಬೆಳಗಾವಿ: ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ. ನಾವು ಅವರ ಜೊತೆಗೆ ಇದ್ದೇವೆ, ಇಡೀ ಪಕ್ಷ ಅವರ ಜೊತೆ ಇದೆ. ಜಗದೀಶ್​ ಶೆಟ್ಟರ್, ಲಕ್ಷ್ಮಣ ಸವದಿ ನಮ್ಮ ಪಕ್ಷದ ನಾಯಕರು ಎಂದು...

ರಾಜ್ಯದ ವಿವಿದೆಡೆ ಲೋಕಾಯುಕ್ತ ದಾಳಿ

ಬೆಂಗಳೂರು:  ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಮೇ 31) ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಮತ್ತೊಂದೆಡೆ ರಾಜ್ಯದ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತುಮಕೂರಿನ ಕೆಐಎಡಿಬಿ ಅಧಿಕಾರಿ ಮನೆ ಮೇಲೆ ದಾಳಿ ತುಮಕೂರಿನ ಕೆಐಎಡಿಬಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -