ಬೆಂಗಳೂರು : ಸಿನಿಮಾ ನಿರ್ದೇಶಕ ಕೆ.ಆರ್. ಮುರಳಿ ಕೃಷ್ಣ ಅವರು ಸೋಮವಾರ ಅವರು ವಿಧಿವಶರಾಗಿದ್ದಾರೆ. ಕನ್ನಡದ ಗರ ಮುಂತಾದ ಚಿತ್ರಗಳನ್ನು ನಿರ್ದೇಶಿಸಿ, ಕೆಲವು ಸಿನಿಮಾಗಳಿಗೆ ಬಂಡವಾಳ ಹೂಡಿದ್ದ ಅವರು ಹೃದಯಾಘಾತದಿಂದ ಕೊನೆಯುಸಿರು ಎಳೆದಿದ್ದಾರೆ.
ಕೆ.ಆರ್. ಮುರಳಿ ಕೃಷ್ಣ ಅವರಿಗೆ ಬ್ರೈನ್ ಟ್ಯೂಮರ್ ಆಗಿತ್ತು. ಅದರ ಸಲುವಾಗಿ ಇತ್ತೀಚೆಗೆ ಶಸ್ತ್ರ ಚಿಕಿತ್ಸೆ ನೆರವೇರಿಸಲಾಗಿತ್ತು.
ಆದರೆ ಸರ್ಜರಿ ಬಳಿಕ ಅವರಿಗೆ ಹೃದಯಾಘಾತ ಸಂಭವಿಸಿದ ಪರಿಣಾಮವಾಗಿ ನಿಧನರಾಗಿದ್ದಾರೆ. ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.