spot_img
spot_img
spot_img
24 C
Belagavi
Thursday, June 1, 2023
spot_img

ಕಿತ್ತೂರು ತಹಶೀಲ್ದಾರನ್ನು ಹಿಡಿದುಕೊಟ್ಟಿದ್ದ ದೂರುದಾರನ ತಂದೆ ಹೃದಯಾಘಾತದಿಂದ ನಿಧನ

ಬೆಳಗಾವಿ : ಖಾತೆ ಬದಲಾವಣೆಗಾಗಿ ಲಂಚ ಕೇಳಿದ್ದ ಕಿತ್ತೂರು ತಹಶೀಲ್ದಾರ್, ಗುಮಾಸ್ತರ ನ್ನು ಲಂಚದ ಸಮೇತ ಮೇಲೆ ಲೋಕಾಯುಕ್ತರಿಗೆ ಬಲೆಗೆ ಹಿಡಿದುಕೊಟ್ಟ ಅರ್ಜಿದಾರರ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಕಿತ್ತೂರು ತಾಲೂಕಿನ ಖೋದಾನಪುರ ಗ್ರಾಮದಲ್ಲಿ ಬಾಪುಸಾಹೇಬ್ ಇನಾಮದಾರ್ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಇವರ ಪುತ್ರ ರಾಜೇಂದ್ರ ಇನಾಮದಾರ್ ದೂರು ನೀಡಿದ್ದರು.

10 ಎಕರೆ ಜಮೀನಿನ ಖಾತಾ ಬದಲಾವಣೆ ಸಂಬಂಧ ಲಂಚ ಕೇಳಿದ್ದ ತಹಶಿಲ್ದಾರ್ ಮೇಲೆ ಅವರು ಲೋಕಾಯುಕ್ತ ಠಾಣೆಗೆ ದೂರು ನೀಡಿದ್ದರು. ನಿನ್ನೆ ತಡರಾತ್ರಿ 2 ಲಕ್ಷ ರೂ. ಹಣ ಪಡೆಯುವಾಗ ತಹಶೀಲ್ದಾರ್ ಸೋಮಲಿಂಗಪ್ಪ ಹಾಲಗಿ, ಗುಮಾಸ್ತ ಪ್ರಸನ್ನ ಜಿ. ಇವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ತಡರಾತ್ರಿ ಕಿತ್ತೂರು ತಾಲ್ಲೂಕಿನಾದ್ಯಂತ ಈ ಸುದ್ದಿ ಹಬ್ಬಿದ್ದು, ಇದರಿಂದ ಆಘಾತಕ್ಕೆ ಒಳಗಾಗಿ ಬಾಪುಸಾಹೇಬ್ ಇನಾಮದಾರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.

ಇನ್ನು ಕಿತ್ತೂರು ತಹಶೀಲ್ದಾರ್ ಮತ್ತು ಗುಮಾಸ್ತರನ್ನು ಲೋಕಾಯುಕ್ತ ಪೊಲೀಸರು ಬೆಳಗಾವಿಗೆ ಕರೆತಂದಿದ್ದಾರೆ. ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಆರೋಪಿಗಳ ವೈದ್ಯಕೀಯ ತಪಾಸಣೆ ನಡೆದಿದ್ದು, ಬಳಿಕ ಲೋಕಾಯುಕ್ತ ಕೋರ್ಟ್ ನ್ಯಾಯಾಧೀಶರ ಮನೆಗೆ ಆರೋಪಿತರನ್ನು ಕರೆದೊಯ್ಯಲಾಗಿದೆ.

Related News

ಶೆಟ್ಟರ್​, ಲಕ್ಷ್ಮಣ್ ಸವದಿ ನಮ್ಮ ನಾಯಕರು ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ

ಬೆಳಗಾವಿ: ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ. ನಾವು ಅವರ ಜೊತೆಗೆ ಇದ್ದೇವೆ, ಇಡೀ ಪಕ್ಷ ಅವರ ಜೊತೆ ಇದೆ. ಜಗದೀಶ್​ ಶೆಟ್ಟರ್, ಲಕ್ಷ್ಮಣ ಸವದಿ ನಮ್ಮ ಪಕ್ಷದ ನಾಯಕರು ಎಂದು...

ರಾಜ್ಯದ ವಿವಿದೆಡೆ ಲೋಕಾಯುಕ್ತ ದಾಳಿ

ಬೆಂಗಳೂರು:  ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಮೇ 31) ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಮತ್ತೊಂದೆಡೆ ರಾಜ್ಯದ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತುಮಕೂರಿನ ಕೆಐಎಡಿಬಿ ಅಧಿಕಾರಿ ಮನೆ ಮೇಲೆ ದಾಳಿ ತುಮಕೂರಿನ ಕೆಐಎಡಿಬಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -