ಶಿವಮೊಗ್ಗ: ಕ್ಯಾಬಿನೆಟ್ ಬಗ್ಗೆ ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ. ಎರಡೂವರೆ ವರ್ಷದ ನಂತರ ಹಳಬರು ತೆಗೆದು ಹೊಸಬರು ಹಾಕುತ್ತೇವೆ ಅಂತಾರೆ. ಅಶೋಕ್ ಪಟ್ಟಣ್ ಕ್ಯಾಬಿನೆಟ್ ಬಗ್ಗೆ ಮಾತನಾಡುತ್ತಾರೆ. ಈ ಬಗ್ಗೆ ಎಂ.ಬಿ.ಪಾಟೀಲ್, ಅಶೋಕ್ ಪಟ್ಟಣ್ ಹೇಳಲು ಯಾರು? ಒಬ್ಬೊಬ್ಬ ಮಂತ್ರಿ ಒಂದೊಂದು ಹೇಳಿಕೆ ಕೊಡೋದು ಒಳ್ಳೆಯದಲ್ಲ. ಮುಖ್ಯಮಂತ್ರಿಗಳು ಗಮನ ಹರಿಸಲಿ ಈ ರೀತಿ ಸಚಿವರು ಹೇಳಿಕೆ ಕೊಡುವುದು ನಿಲ್ಲಿಸಲಿ. ಮೈಸೂರು ಬಿಟ್ಟರೆ ಶಿವಮೊಗ್ಗ ದಸರಾ ವೈಭವವಾಗಿ ನಡೆಯುತ್ತದೆ. ಆದರೆ ದಸರಾ ಆಚರಣೆಗೆ ಸರ್ಕಾರ ಕೇವಲ 20 ಲಕ್ಷ ರೂ. ಅಷ್ಟೇ ಕೊಟ್ಟಿದೆ. ಏಕೆ ಸರಕಾರಕ್ಕೆ ಬಡತನ ಇದೆಯಾ? ಸರಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ನೀವು ಹಣ ಕೊಡದಿದ್ದರೆ ಹೇಳಿ ನಾವು ಸಾರ್ವಜನಿಕರ ಬಳಿ ಚಂದಾ ಎತ್ತಿ ದಸರಾ ಆಚರಣೆ ಮಾಡುತ್ತೇವೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದರು.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...