spot_img
spot_img
spot_img
21.3 C
Belagavi
Sunday, October 1, 2023
spot_img

ಗೃಹಲಕ್ಷ್ಮಿ ಅರ್ಜಿ ಸಲ್ಲಿಕೆಯ ಖರ್ಚನ್ನು ಸರಕಾರವೇ ಬರಿಸಲಿದೆ

ಬೆಳಗಾವಿ: ರಾಜ್ಯದ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಒಂದು ರೂಪಾಯಿಯೂ ಖರ್ಚು ಮಾಡುವುದು ಬೇಡ. ಅರ್ಜಿ ಸಲ್ಲಿಕೆ ವೇಳೆ ಇರುವ 20 ರೂ. ಹಣವನ್ನು ಸರ್ಕಾರವೇ ಭರಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ರಾಜ್ಯದ ಹಲವೆಡೆ ಗೃಹಲಕ್ಷ್ಮಿ ಯೋಜನೆಯ ನಕಲಿ ಅರ್ಜಿಗೆ 150 ರೂ. ಶುಲ್ಕ ವಸೂಲಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಹೆಬ್ಬಾಳ್ಕರ್, ಬಳ್ಳಾರಿಯಲ್ಲಿ ಈ ರೀತಿ ಪ್ರಕರಣ ನಡೆದಿರುವುದು ನನಗೂ ಬೆಳಗ್ಗೆಯೇ ಮಾಹಿತಿ ಬಂದಿದೆ. ನನ್ನ ಎಲ್ಲ ಇಲಾಖೆಯ ಸಿಬ್ಬಂದಿಗೂ ಈಗಾಗಲೇ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಸೇವಾ ಕೇಂದ್ರಗಳಿಗೆ 20 ರೂ. ಹಣ ನೀಡುವ ನಿರ್ಧಾರ ತೆಗೆದುಕೊಂಡಿದ್ದೇವೆ. ಸೇವಾ ಸಿಂಧು, ಗ್ರಾಂ ಒನ್, ನಾಡಕಚೇರಿ, ಬಾಪುಜಿ ಸೇವಾ ಕೇಂದ್ರಗಳಿಗೆ ನಾವೇ ಹಣ ಭರಿಸುತ್ತೇವೆ. ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ನನ್ನ ಇಲಾಖೆಯಿಂದಲೇ ಪ್ರತಿ ಅರ್ಜಿಗೆ 20 ರೂ. ಹಣವನ್ನು ಸೇವಾ ಕೇಂದ್ರಗಳಿಗೆ ನೀಡುತ್ತೇವೆ. ಮಧ್ಯವರ್ತಿಗಳ ಆಮಿಷಗಳಿಗೆ ರಾಜ್ಯದ ಮಹಿಳೆಯರು ಒಳಗಾಗಬಾರದು, ಕಿವಿಗೊಡಬಾರದು ಎಂದು ತಿಳಿಹೇಳಿದರು.

Related News

ಸರಕಾರದ ಜೊತೆ ಎಲ್ಲ ಸಮಾಜದವರೂ ಇದ್ದಾರೆ – ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ. ಕೇವಲ ಒಂದು ಸಮುದಾಯದ ಬೆಂಬಲದಿಂದ ಅಧಿಕಾರಕ್ಕೇರಿಲ್ಲ. ಎಲ್ಲಾ ಸಮಾಜದವರೂ ಸರಕಾರದೊಂದಿಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್...

ನಿಮ್ಮ ಆಸ್ತಿಗಳ ಮೌಲ್ಯಗಳನ್ನು ಅಪಮೌಲ್ಯ ಮಾಡಬೇಡಿ ನೈಜ್ಯ ಬೆಲೆಗೆ ವ್ಯವಹಾರ ಮಾಡಿ

ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರ ಸ್ಥಿರ ಆಸ್ತಿಗಳು ಮಾರ್ಗಸೂಚಿ ಬೆಲೆ ಪರಿಷ್ಕರಣೆ ಅಕ್ಟೋಬರ್ ಒಂದರಿಂದ ಶೆ. 10%ರಿಂದ 30%ವರೆಗೆ ಹೆಚ್ಚಳ ಮಾಡುವುದಾಗಿ ಆದೇಶ ಹೊರಡಿಸಿದೆ. ಅದರ ಅಂಗವಾಗಿ ಬೆಳಗಾವಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -