spot_img
spot_img
spot_img
34.1 C
Belagavi
Wednesday, June 7, 2023
spot_img

ಸ್ಮಶಾನದಲ್ಲಿ ಹುಟ್ಟು ಹಬ್ಬ ಆಚರಿಸಿ, ಬಿರಿಯಾನಿ ಊಟ ಹಾಕಿಸಿದ ವ್ಯಕ್ತಿ 

ಥಾಣೆ: ಮೂಢನಂಬಿಕೆಗಳ ವಿರುದ್ಧ ಜಾಗೃತಿ ಮೂಡಿಸಲು ಮಹಾರಾಷ್ಟ್ರದ ಥಾಣೆ ಜಿಲ್ಲೆಯ ವ್ಯಕ್ತಿಯೊಬ್ಬರು ಸ್ಮಶಾನದಲ್ಲಿ ತಮ್ಮ ಜನ್ಮದಿನವನ್ನು ಆಚರಿಸಿಕೊಂಡಿದ್ದಾರೆ. ಸ್ಮಶಾನದಲ್ಲೇ ದೊಡ್ಡ ಕೇಕ್​ ಕತ್ತರಿಸಿ, ನೂರಾರು ಜನರಿಗೆ ಅಲ್ಲಿಯೇ ಬಿರಿಯಾನಿ ಊಟ ಬಡಿಸಿದ್ದಾರೆ.

ಥಾಣೆ ಜಿಲ್ಲೆಯ ಕಲ್ಯಾಣ್​ ಪಟ್ಟಣದ ಗೌತಮ್​ ರತನ್​ ಮೋರೆ ಎಂಬುವವರು ಸ್ಮಶಾನದಲ್ಲಿ ಬರ್ತಡೇ ಆಚರಿಸಿಕೊಂಡವರು. 54 ನೇ ವರ್ಷಕ್ಕೆ ಕಾಲಿಟ್ಟ ಗೌತಮ್ ಅವರು ವಿಶೇಷವಾಗಿ ಮತ್ತು ಸಮಾಜಕ್ಕೆ ಸಂದೇಶ ನೀಡುವ ನಿಟ್ಟಿನಲ್ಲಿ ಜನ್ಮದಿನ ಆಚರಣೆಗೆ ಯೋಚಿಸಿದ್ದರು.

ಅದರಂತೆ ಮೂಢನಂಬಿಕೆಗಳು, ದೆವ್ವಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಮೊಹಾನೆ ಎಂಬ ಸ್ಥಳೀಯ ಸ್ಮಶಾನದಲ್ಲಿ ತಮ್ಮ ಸಂಗಡಿಗರ ಸಮೇತ ಸಂಭ್ರಮಾಚರಣೆ ಮಾಡಿದ್ದಾರೆ. ಮಧ್ಯರಾತ್ರಿ ಕೇಕ್​ ಕತ್ತರಿಸಿ, 40 ಮಹಿಳೆಯರು ಸೇರಿ 100 ಕ್ಕೂ ಅಧಿಕ ಅತಿಥಿಗಳಿಗೆ ಬಿರಿಯಾನಿ ಊಟದ ಪಾರ್ಟಿ ನೀಡಿದ್ದಾರೆ.

Related News

ತಿಂಗಳ ಸರಾಸರಿ ಮೀರಿದ್ರೆ ಹೆಚ್ಚುವರಿ ಯೂನಿಟ್‌ನ ಹಣ ಕಟ್ಟಬೇಕು: ಕೆಜೆ ಜಾರ್ಜ್

ಈಗಾಗಲೇ ಸಿಎಂ ಗೃಹಜ್ಯೋತಿ ಯೋಜನೆ ಬಗ್ಗೆ ವಿಸ್ಕೃತವಾಗಿ ತಿಳಿಸಿದ್ದಾರೆ. 200 ಯೂನಿಟ್ ವರೆಗೆ ಪ್ರತಿಯೊಬ್ಬರಿಗೆ ಉಚಿತವಾಗಿ ವಿದ್ಯುತ್ ಕೊಡುವ ಯೋಜನೆ ಇದಾಗಿದೆ. ಗೃಹಬಳಕೆಯ ಗ್ರಾಹಕರ ಒಂದು ವರ್ಷದ ಸರಾಸರಿ ತೆಗೆದುಕೊಂಡು 10% ಸೇರಿಸಿ...

ಮಾಜಿ ಮಧ್ಯಮ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ ಹಾಗೂ ಅವರ ಧರ್ಮಪತ್ನಿ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕಸ್ಮಿಕ ಬೇಟಿ ಉಭಯ ಕುಶಲೋಪರಿ ವಿಚಾರಣೆ

ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಭಾರತೀಯ ರಾಷ್ಟ್ರೀಯ ಕ್ರಿಕೆಟ್ ತಂಡದ ಮಾಜಿ ಮಧ್ಯಮ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ ಹಾಗೂ ಅವರ ಧರ್ಮಪತ್ನಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -