spot_img
spot_img
spot_img
spot_img
spot_img
spot_img
spot_img
spot_img
spot_img
26.1 C
Belagavi
Friday, September 22, 2023
spot_img

ತೀವ್ರಗೊಳ್ಳುತ್ತಿರುವ ಬೆಳಗಾವಿ ಜಿಲ್ಲೆ ವಿಭಜನೆ ಕಿಚ್ಚು: ಅಥಣಿ ಜಿಲ್ಲೆ ಮಾಡುವಂತೆ ಮಠಾಧೀಶರ ನೇತೃತ್ವದಲ್ಲಿ ಸಭೆ

ಚಿಕ್ಕೋಡಿ: ಬೆಳಗಾವಿ ಜಿಲ್ಲೆ ವಿಭಜನೆ ಕಿಚ್ಚು ದಿನೇದಿನೆ ತೀವ್ರಗೊಳ್ಳುತ್ತಿದೆ. ಅಥಣಿಯನ್ನು ಜಿಲ್ಲೆ ಮಾಡುವಂತೆ ಹೋರಾಟ ಮಾಡವ ಕುರಿತು ಮೂವರು ಮಠಾಧೀಶರ ನೇತೃತ್ವದಲ್ಲಿ ಸಭೆ ನಡೆದಿದೆ. ಅಥಣಿ ಪಟ್ಟಣದಲ್ಲಿರುವ ಮೋಟಗಿ ಮಠದ ಪ್ರಭುಚನ್ನಬಸವ ಸ್ವಾಮೀಜಿ, ಗಚ್ಚಿನಮಠದ ಶಿವಬಸವಶ್ರೀ, ಶೆಟ್ಟರಮಠದ ಮರುಳಸಿದ್ದ ಸ್ವಾಮೀಜಿ ನೇತೃತ್ವದಲ್ಲಿ ಅಥಣಿಯ ಶಿವಣಗಿ ಸಾಂಸ್ಕೃತಿಕ ಸಭಾಭವನದಲ್ಲಿ ರೈತ ಮುಖಂಡರು, ಸಾಹಿತಿಗಳು, ಮಾಜಿ ಯೋಧರು ಸೇರಿ ಹಲವರು ಸಭೆಯಲ್ಲಿ ಭಾಗಿಯಾಗಿದ್ದರು.

ಸಚಿವ ಸತೀಶ್ ಜಾರಕಿಹೊಳಿ ಗೋಕಾಕ್, ಚಿಕ್ಕೋಡಿ ಜಿಲ್ಲೆ ಮಾಡಲು ಸರ್ಕಾರಕ್ಕೆ ಆಗ್ರಹಿಸುವುದಾಗಿ ಹೇಳಿದ ಬೆನ್ನಲ್ಲೇ ಅಥಣಿಯನ್ನೂ ಜಿಲ್ಲೆ ಮಾಡಬೇಕೆಂದು ಕೂಗು ಕೇಳಿಬಂದಿದೆ. ಅಥಣಿ ಜಿಲ್ಲೆ ನಮ್ಮ ಹಕ್ಕು ಘೋಷವಾಕ್ಯದಡಿ ನಡೆದ ಪೂರ್ವಭಾವಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ಅಥಣಿ ಜಿಲ್ಲಾ ಹೋರಾಟದ ಸ್ವರೂಪ ಮತ್ತು ರೂಪರೇಷೆ ಕುರಿತು ಚರ್ಚೆ ನಡೆದಿದೆ. ಅಥಣಿ ಜಿಲ್ಲೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲು ನಿರ್ಧರಿಸಲಾಗಿದೆ.

ಕೆಲ ದಿನಗಳ ಹಿಂದೆ ಅಥಣಿಯನ್ನು ಜಿಲ್ಲೆ ಮಾಡಲು ಸರ್ಕಾರದ ಮೇಲೆ ಒತ್ತಡ ಹೇರುವಂತೆ ಅಥಣಿ ಜಿಲ್ಲಾ ಹೋರಾಟ ಸಮಿತಿ ಕಾಂಗ್ರೆಸ್​ ಶಾಸಕ ರಾಜು ಕಾಗೆ ಅವರಿಗೆ ಮನವಿ ಮಾಡಿತ್ತು. ಅಲ್ಲದೇ ಗೋಕಾಕ್, ಚಿಕ್ಕೋಡಿ, ಬೈಲಹೊಂಗಲ ಜನ ಜಿಲ್ಲೆಗೆ ಬೇಡಿಕೆ ಇಡುತ್ತಿದ್ದಾರೆ. ಅದೇರೀತಿ ಅಥಣಿಯನ್ನು ಕೂಡ ಜಿಲ್ಲೆ ಮಾಡುವಂತೆ ಹೋರಾಟ ಮಾಡಲು ನಾವು ಸಿದ್ಧರಿದ್ದೇವೆ ಎಂದು ಸಮೀತಿ ಸದಸ್ಯರು ಹೇಳಿದ್ದರು.

ಅಥಣಿ, ಕಾಗವಾಡ, ರಾಯಬಾಗ ಹಾಗೂ ಬಾಗಲಕೋಟ ಜಿಲ್ಲೆಯ ಜಮಖಂಡಿ, ರಬಕವಿ, ಬನಹಟ್ಟಿ ಸೇರಿಸಿ ಅಥಣಿ ಜಿಲ್ಲೆ ಮಾಡಬೇಕು. ಅಥಣಿಯಿಂದ ಜಿಲ್ಲಾ ಕೇಂದ್ರ ಬೆಳಗಾವಿಗೆ ಬರಲು 200 ಕಿಮೀ ಪ್ರಯಾಣಿಸಬೇಕಾದ ಅನಿವಾರ್ಯತೆ ಇದೆ. ಜನರ ಅನುಕೂಲ, ಅಭಿವೃದ್ಧಿ ದೃಷ್ಟಿಯಿಂದ ಅಥಣಿಯನ್ನು ಜಿಲ್ಲೆ ಮಾಡಬೇಕು ಎಂದು ಸಮಿತಿ ಒತ್ತಾಯ ಮಾಡಿತ್ತು. ಇದೀಗ ಪೂರ್ವಭಾವಿ ಸಭೆ ಮಾಡುವ ಮೂಲಕ ಅಥಣಿ ಜಿಲ್ಲೆ ಮಾಡಲೇಬೆಂಕೆದು ಸರ್ಕಾರಕ್ಕೆ ಒತ್ತಡ ಹೇರಿದೆ.

Related News

ಬೆಳಗಾವಿ ಜಿಲ್ಲೆಯಲ್ಲಿ 14 ಗ್ರಾ.ಪಂಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ

ಬೆಳಗಾವಿ : 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೆಳಗಾವಿ ಜಿಲ್ಲೆಯ 14 ಗ್ರಾಮ ಪಂಚಾಯತಿಗಳು ಆಯ್ಕೆಯಾಗಿದ್ದು ಜಿಲ್ಲಾ ಪಂಚಾಯತ್ ಕಾರ್ಯಾಲಯ ಈ ಕುರಿತು ಆದೇಶ ನೀಡಿದೆ. ಖಾನಾಪುರ – ಬೇಕವಾಡ, ಕಿತ್ತೂರು –...

ಚಂದ್ರಯಾನ-3 ಮೇಲೆ ಇಸ್ರೋ ಕಣ್ಣು ಇಂದು ಎಚ್ಚೆತ್ತುಕ್ಕೊಳ್ಳುತ್ತಾ ಲ್ಯಾಂಡರ್ ಮತ್ತು ರೋವರ್

ಬೆಂಗಳೂರು: ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ಬಳಿಕ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಮತ್ತೊಂದು ಸಾಹಸಕ್ಕೆ ಮುಂದಾಗಿದ್ದು 15 ದಿನಗಳ ಹಿಂದೆ ಚಂದ್ರನಲ್ಲಿ ರಾತ್ರಿಯಾದ ಕಾರಣ ನಿದ್ರೆಗೆ ಜಾರಿಸಿದ್ದ ವಿಕ್ರಮ್ ಲ್ಯಾಂಡರ್ ಮತ್ತು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -