spot_img
spot_img
spot_img
24.8 C
Belagavi
Thursday, June 1, 2023
spot_img

ಸಾವು ಬದುಕಿನ ಮಧ್ಯೆ ನರಳುತ್ತಿರುವ ವೃದ್ಧೆಯನ್ನು ಸಬ್ ರಿಜಿಸ್ಟ್ರಾರ್ ಕಚೇರಿಗೆ ಕರೆಸಿದ ಅಧಿಕಾರಿ

ಬೆಳಗಾವಿ: ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ವೃದ್ಧೆಯನ್ನು ಆಸ್ಪತ್ರೆ ಐಸಿಯುನಿಂದ ಸಹಿ ಮಾಡಲು ಸಬ್​ ರಿಜಿಸ್ಟ್ರಾರ್ ಕಚೇರಿಗೆ ಸಿಬ್ಬಂದಿ ಕರೆಸಿಕೊಂಡಂತಹ ಅಮಾನವೀಯ ಘಟನೆ ಬೆಳಗಾವಿ ದಕ್ಷಿಣ ವಿಭಾಗದ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನಡೆದಿದೆ.

ಆಸ್ತಿಹಂಚಿಕೆ ಪತ್ರಕ್ಕೆ ಸಹಿ ಹಾಕುವ ವಿಚಾರಕ್ಕೆ ಐಸಿಯುನಿಂದ ಸ್ಟ್ರೆಚರ್​ನಲ್ಲೇ 80 ವರ್ಷದ ವೃದ್ಧೆ ಮಹಾದೇವಿಯನ್ನು ಕುಟುಂಬಸ್ಥರು ಕರೆತಂದಿದ್ದಾರೆ.

ವೃದ್ಧೆ ಐಸಿಯುನಲ್ಲಿದ್ದ ಕಾರಣ ಆಸ್ಪತ್ರೆಗೆ ಬರಲು ಉಪನೋಂದಣಾಧಿಕಾರಿ ಪದ್ಮನಾಭ್ ಗುಡಿ ಅವರಿಗೆ ಮನವಿ ಮಾಡಲಾಗಿದೆ. ಆದರೆ ಮನವಿ ನಿರಾಕರಿಸಿದ್ದಾರೆ.

ಆಸ್ಪತ್ರೆಗೆ ಬಂದು ವೃದ್ಧೆ ಸಹಿ ಪಡೆಯಲು ಹಣಕ್ಕೆ ಬೇಡಿಕೆ ಆರೋಪ ಮಾಡಿದ್ದು, ಹಣ ನೀಡಲು ಒಪ್ಪದೇ ವೃದ್ಧೆಯನ್ನು ಕುಟುಂಬಸ್ಥರು ಕಚೇರಿಗೆ ಕರೆತಂದಿದ್ದಾರೆ. ಅಂಧ ಅಧಿಕಾರಿಯ ನಡುವಳಿಕೆಯಿಂದ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

 

Related News

ಶೆಟ್ಟರ್​, ಲಕ್ಷ್ಮಣ್ ಸವದಿ ನಮ್ಮ ನಾಯಕರು ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ

ಬೆಳಗಾವಿ: ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ. ನಾವು ಅವರ ಜೊತೆಗೆ ಇದ್ದೇವೆ, ಇಡೀ ಪಕ್ಷ ಅವರ ಜೊತೆ ಇದೆ. ಜಗದೀಶ್​ ಶೆಟ್ಟರ್, ಲಕ್ಷ್ಮಣ ಸವದಿ ನಮ್ಮ ಪಕ್ಷದ ನಾಯಕರು ಎಂದು...

ರಾಜ್ಯದ ವಿವಿದೆಡೆ ಲೋಕಾಯುಕ್ತ ದಾಳಿ

ಬೆಂಗಳೂರು:  ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಮೇ 31) ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಮತ್ತೊಂದೆಡೆ ರಾಜ್ಯದ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತುಮಕೂರಿನ ಕೆಐಎಡಿಬಿ ಅಧಿಕಾರಿ ಮನೆ ಮೇಲೆ ದಾಳಿ ತುಮಕೂರಿನ ಕೆಐಎಡಿಬಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -