spot_img
spot_img
spot_img
spot_img
spot_img
spot_img
spot_img
spot_img
spot_img
21 C
Belagavi
Wednesday, September 27, 2023
spot_img

ರಾಜಧಾನಿ ಬೆಂಗಳೂರಿನಲ್ಲೂ 2 ದಿನಗಳ ಕಾಲ ಭಾರಿ ಮಳೆ ಸಾಧ್ಯತೆ ಪ್ರತಿಭಟನೆಗೆ ಅಡ್ಡಿ

ಬೆಂಗಳೂರು: ರಾಜ್ಯದ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ರಾಜಧಾನಿ ಬೆಂಗಳೂರಿನಲ್ಲೂ ಕೂಡ 2 ದಿನಗಳ ಕಾಲ ಭಾರಿ ಮಳೆಯಾಗುವ ಸಂಭವವಿದೆ. ಇನ್ನು ದಕ್ಷಿಣ ಒಳನಾಡಿನ ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಯಲ್ಲಿ ಉತ್ತಮ ಮಳೆ ನಿರೀಕ್ಷೆಯಿದ್ದು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇತ್ತಕಡೆ ಪ್ರತಿಭಟನೆಗೆ ಮುಂದಾಗಿರುವ ಕಾಂಗ್ರೆಸ್, ಬಿಜೆಪಿಗೆ ಮಳೆ ಅಡೆತಡೆ ಒಡ್ಡಿದೆ. ರಾಜ್ಯಕ್ಕೆ ನೀಡುತ್ತಿದ್ದ ಅಕ್ಕಿಯನ್ನ ನಿಲ್ಲಿಸಿದ ಹಿನ್ನಲೆ ಇಂದು ಬೆಳಿಗ್ಗೆ 11ಗಂಟೆಗೆ ಕಾಂಗ್ರೆಸ್​ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಇದೀಗ ಮಳೆ ಅಡ್ಡಿಯಾಗಿದೆ. ಹೌದು ಧಾರಾಕಾರವಾಗಿ ಮಳೆ ಸುರಿಯುತ್ತಿದೆ.

ಮೆಜೆಸ್ಟಿಕ್​​, ಶಾಂತಿನಗರ, ವಿಧಾನಸೌಧ, ಕಾರ್ಪೊರೇಷನ್ ಸರ್ಕಲ್, ಶಿವಾಜಿನಗರ, ಕೆ.ಆರ್.ಮಾರ್ಕೆಟ್​, ಮೈಸೂರು ರಸ್ತೆ, ಮಾಗಡಿ ರಸ್ತೆ, ವಿಜಯನಗರ, ಜಯನಗರ, ಶಿವಾನಂದ ಸರ್ಕಲ್​, ಮೇಖ್ರಿ ಸರ್ಕಲ್, ರಾಜಾಜಿನಗರ, ಯಶವಂತಪುರ, ಚಂದ್ರಾಲೇಔಟ್, ನಂದಿನಿ ಲೇಔಟ್​, ಬಸವೇಶ್ವರನಗರ, ಕಾಮಾಕ್ಷಿಪಾಳ್ಯ, ಬನಶಂಕರಿ, ಬಸವನಗುಡಿ, ಹೆಬ್ಬಾಳ, ಯಲಹಂಕ, ಶ್ರೀನಗರ, ಆರ್.ಟಿ.ನಗರ ಸೇರಿ ಹಲವೆಡೆ ಮಳೆಯಿಂದ ಬೈಕ್ ಸವಾರರು, ರಸ್ತೆ ಬದಿ ವ್ಯಾಪಾರಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇನ್ನು ಭಾರಿ ಮಳೆಗೆ ನದಿಯಂತಾಗಿರುವ ಬೆಂಗಳೂರಿನ ಪ್ರಮುಖ ರಸ್ತೆಗಳಿಂದ ಹಲವೆಡೆ ಟ್ರಾಫಿಕ್ ಜಾಮ್​ ಉಂಟಾಗಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

Related News

ಕೆಳಮಟ್ಟದಲ್ಲಿ ನೋಡುತ್ತಿದ್ದ ಖಾತೆಯನ್ನು ಈಗ ವಿಶ್ವವೇ ನೋಡುವಂತಾಗಿದೆ – ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...

ಜಲಜೀವನ್ ಮಿಷನ್ ಯೋಜನೆಗೆ ಚನ್ನರಾಜ ಹಟ್ಟಿಹೊಳಿ ಚಾಲನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು‌ ನೀಡಿದರು. ತಂದನಂತರ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -