spot_img
spot_img
spot_img
spot_img
spot_img
spot_img
spot_img
spot_img
spot_img
21 C
Belagavi
Wednesday, September 27, 2023
spot_img

ತವರು ಮನೆಯಿಂದ ಕರೆತರಲು ಹೋದ ಪತಿಗೆ ಬೆಂಕಿ ಹಚ್ಚಿದ ಪತ್ನಿ

ಲಕ್ನೋ: ತವರು ಮನೆಯಿಂದ ಪತ್ನಿಯನ್ನು ಕರೆದುಕೊಂಡು ಬರಲು ತೆರಳಿದ್ದ ಪತಿಯನ್ನು ಹೆಂಡತಿಯೇ ಪೆಟ್ರೋಲ್ ಸುರಿದು ಸಜೀವ ದಹನ ಮಾಡಿದ ಘಟನೆ ಆಗ್ರಾದಲ್ಲಿ ನಡೆದಿದೆ.

ಮೃತನನ್ನು ಧರ್ಮೇಂದ್ರ ಎಂದು ಗುರುತಿಸಲಾಗಿದೆ. ಆತ ತವರು ಮನೆಯಲ್ಲಿದ್ದ ಪತ್ನಿಯನ್ನು ಮನೆಗೆ ಕರೆದುಕೊಂಡು ಹೋಗಲು ತೆರಳಿದ್ದ ವೇಳೆ ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಈ ಕೃತ್ಯ ಎಸಗಿದ್ದಾರೆ. ಪೆಟ್ರೋಲ್ ಸುರಿದು ಬೆಂಕಿ ಹಚ್ಚುತ್ತಿದ್ದಂತೆ ಆತ ಕೂಗಿಕೊಂಡು ಮನೆಯಿಂದ ಹೊರಗೆ ಓಡಿಹೋಗಿದ್ದಾನೆ. ಕೂಡಲೇ ಸ್ಥಳೀಯರು ರಕ್ಷಿಸಲು ಪ್ರಯತ್ನಿಸಿದ್ದಾರೆ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಈ ಸಂಬಂಧ ಮೃತನ ಸಹೋದರ ಪೊಲೀಸರಿಗೆ ದೂರು ನೀಡಿದ್ದಾನೆ. ಆರೋಪಿಗಳ ವಿರುದ್ಧ ಸೆಕ್ಷನ್ 307 (ಕೊಲೆಗೆ ಯತ್ನ) ಅಡಿಯಲ್ಲಿ ದಾಖಲಿಸಲಾಗಿತ್ತು. ಈಗ ಸಂತ್ರಸ್ತ ಮೃತಪಟ್ಟಿದ್ದು ಅದನ್ನು ತಿದ್ದುಪಡಿ ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತನ ಸಹೋದರ ನೀಡಿದ ದೂರಿನಲ್ಲಿ ಧರ್ಮೇಂದ್ರ ಮತ್ತು ಆತನ ಪತ್ನಿ ಪ್ರೀತಿ 2019 ರಲ್ಲಿ ಮದುವೆಯಾಗಿದ್ದರು. ಮದುವೆಯ ಆರಂಭದಿಂದಲೂ ಪ್ರೀತಿ ಮತ್ತು ಅವರ ಕುಟುಂಬದ ನಡವಳಿಕೆ ವಿಚಿತ್ರವಾಗಿತ್ತು. ಪ್ರೀತಿ ತನ್ನ ತವರು ಮನೆಯಲ್ಲಿ ಹೆಚ್ಚಿನ ಸಮಯವನ್ನು ಕಳೆಯುತ್ತಿದ್ದಳು. ಮೂರು ತಿಂಗಳ ಹಿಂದೆ ಅವಳು ಮನೆಗೆ ಹೋಗಿದ್ದಳು. ಅವಳನ್ನು ಕರೆದುಕೊಂಡು ಬರಲು ಧರ್ಮೇಂದ್ರ ತೆರಳಿದ್ದ ಎಂದು ಉಲ್ಲೇಖಿಸಲಾಗಿದೆ.

Related News

ಕೆಳಮಟ್ಟದಲ್ಲಿ ನೋಡುತ್ತಿದ್ದ ಖಾತೆಯನ್ನು ಈಗ ವಿಶ್ವವೇ ನೋಡುವಂತಾಗಿದೆ – ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...

ಜಲಜೀವನ್ ಮಿಷನ್ ಯೋಜನೆಗೆ ಚನ್ನರಾಜ ಹಟ್ಟಿಹೊಳಿ ಚಾಲನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು‌ ನೀಡಿದರು. ತಂದನಂತರ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -