ಮುಂದಿನ 5 ವರ್ಷ ನಿಖಿಲ್ರನ್ನು ಚುನಾವಣೆಗೆ ಕರೆತರುವ ಪ್ರಶ್ನೆ ಇಲ್ಲ ಎಂದು ಮಂಡ್ಯದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಕಲಾವಿದನಾಗಿ ಜೀವನ ರೂಪಿಸಿಕೊಳ್ಳುವಂತೆ ನಿಖಿಲ್ಗೆ ಹೇಳಿದ್ದೇನೆ.
ರಾಜಕೀಯದ ಸಹವಾಸಕ್ಕೆ ಹೋಗದೆ, ಭಗವಂತ ಕೊಟ್ಟ ಕಲೆ ಇದೆ. ನಿಖಿಲ್ ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಈಗಾಗಲೇ 3 ಚಿತ್ರ ನಿರ್ಮಾಣ ಮಾಡಲು ಹಲವು ಸಂಸ್ಥೆಗಳು ಬಂದಿವೆ. ಈಗಾಗಲೇ ನಿಖಿಲ್ ಎರಡು ಬಾರಿ ಚುನಾವಣೆಯಲ್ಲಿ ಸೋತಿದ್ದಾನೆ. ಮಂಡ್ಯ ಲೋಕಸಭೆ ಚುನಾವಣೆಯಲ್ಲೂ ಸ್ಪರ್ಧಿಸಲು ತಯಾರಿರಲಿಲ್ಲ. ಕಾರ್ಯಕರ್ತರು ಹಾಗೂ ಶಾಸಕರ ಒತ್ತಡಕ್ಕೆ ನಿಖಿಲ್ ತಲೆ ಕೊಟ್ಟ. ಸೋಲು, ಗೆಲವು ಸಾಮಾನ್ಯ, ಆ ಬಗ್ಗೆ ಚಿಂತಿಸುವುದಿಲ್ಲ. ಹೆಚ್.ಡಿ.ದೇವೇಗೌಡರು, ನಾನು ಚುನಾವಣೆಯಲ್ಲಿ ಸೋತಿಲ್ವಾ? ಎಂದರು
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ. ಕೇವಲ ಒಂದು ಸಮುದಾಯದ ಬೆಂಬಲದಿಂದ ಅಧಿಕಾರಕ್ಕೇರಿಲ್ಲ. ಎಲ್ಲಾ ಸಮಾಜದವರೂ ಸರಕಾರದೊಂದಿಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್...
ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರ ಸ್ಥಿರ ಆಸ್ತಿಗಳು ಮಾರ್ಗಸೂಚಿ ಬೆಲೆ ಪರಿಷ್ಕರಣೆ ಅಕ್ಟೋಬರ್ ಒಂದರಿಂದ ಶೆ. 10%ರಿಂದ 30%ವರೆಗೆ ಹೆಚ್ಚಳ ಮಾಡುವುದಾಗಿ ಆದೇಶ ಹೊರಡಿಸಿದೆ.
ಅದರ ಅಂಗವಾಗಿ ಬೆಳಗಾವಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ...