ಬೆಂಗಳೂರು: ಶ್ರೀನಿವಾಸ ಕಲ್ಯಾಣದ ಬಳಿಕ, ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದರು. ಈ ಬೆನ್ನಲ್ಲೇ ರಾಮನಗರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಲಾಗಿದೆ.
ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವಂತ ಶಾಸಕಿ ಅನಿತಾ ಕುಮಾರಸ್ವಾಮಿಯವರು, ರಾಮನಗರದ ಅಭ್ಯರ್ಥಿಯಾಗಿ ನಿಖಿಲ್ ಕಣಕ್ಕೆ ಇಳಿಯಲಿದ್ದಾರೆ. ನಮ್ಮ ಮಾವನವರಿಗೆ, ನನ್ನ ಪತಿ ಅವರಿಗೆ, ನನಗೆ ಕೊಟ್ಟ ಬೆಂಬಲವನ್ನು ನನ್ನ ಮಗನಿಗೂ ಕೊಡುವಂತೆ ಮನವಿ ಮಾಡಿದರು.
ಇನ್ನೂ ಕೆಲವರು ಈ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಅದಕ್ಕೆಲ್ಲಾ ತೆರೆ ಎಳೆಯಬೇಕು ಎಂದು ಇವತ್ತು ನಿರ್ಧಾರ ಮಾಡಿದ್ದೇನೆ. ನಿಖಿಲ್ ಕುಮಾರಸ್ವಾಮಿ ರಾಮನಗರದಿಂದ ಕಣಕ್ಕೆ ಇಳಿಯುವುದಾಗಿ ಘೋಷಣೆ ಮಾಡಿದರು