spot_img
spot_img
spot_img
34.1 C
Belagavi
Monday, May 29, 2023
spot_img

ಜನರ ಮುಂದೆ ಮಂಡಿಯೂರಿ ಕ್ಷಮೆಯಾಚಿಸಿದ ಸಂಜಯ್ ಪಾಟೀಲ್ : ಕಾರಣ ಇಷ್ಟೆ 

ಬೆಳಗಾವಿ: ತಮ್ಮ ಜನ್ಮದಿನ ಕಾರ್ಯಕ್ರಮದಲ್ಲಿ ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ಅವರು ಮಂಡಿಯೂರಿ ಕ್ಷಮೆಯಾಚಿಸಿದ ಘಟನೆ ನಡೆದಿದೆ.

ಜನ್ಮದಿನ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ಸಂಜಯ್ ಪಾಟೀಲ್, 2023ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಗೆಲ್ಲಬೇಕು.

10 ವರ್ಷದಲ್ಲಿ ಶಾಸಕನಾದಾಗ ಏನಾದರೂ ತಪ್ಪು ಮಾಡಿದರೆ ನನ್ನ ಕ್ಷಮಿಸಿ, ಮಂಡಿಯೂರಿ ನಿಮ್ಮ ಕ್ಷಮೆ ಕೇಳುವೆ ನನ್ನ ಕ್ಷಮಿಸಿ ಎಂದು ವೇದಿಕೆ ಮೇಲೆ ಮಂಡಿಯೂರಿ ಕ್ಷಮೆಯಾಚಿಸಿದರು.

ಶಾಸಕನಾಗಿದ್ದಾಗ ನಾನು ತಪ್ಪು ಮಾಡಿದ್ದರೆ ಕ್ಷಮೆ ಕೇಳುವೆ, ಆದರೆ ಪ್ರಧಾನಿ ನರೇಂದ್ರ ಮೋದಿಗೆ ಶಿಕ್ಷೆ ಕೊಡಬೇಡಿ, ಹಿಂದು ಸಂಸ್ಕೃತಿ ರಕ್ಷಿಸುವ ಮೋದಿ ಕೈ ಬಲಹೀನ ಮಾಡಬೇಡಿ. ಸಂಜಯ್ ಪಾಟೀಲ್‌ಗೆ ಶಿಕ್ಷೆ ನೀಡಬೇಕಂದರೆ ಕಪಾಳಮೋಕ್ಷ ಮಾಡಿ ನಡೆಯುತ್ತದೆ.

ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನೇ ಗೆಲ್ಲಿಸಿ. ಯಾರಿಗೆ ಟಿಕೆಟ್ ಸಿಗುತ್ತದೆಯೋ ನನಗೆ ಗೊತ್ತಿಲ್ಲ. ದೇವರ ಮೇಲೆ ನನಗೆ ವಿಶ್ವಾಸ ಇದೆ. ದೇವರ ಆಶೀರ್ವಾದದಿಂದ ನನಗೆ ಟಿಕೆಟ್ ಸಿಗುತ್ತದೆ ಎಂಬ ವಿಶ್ವಾಸ ಇದೆ ಎಂದರು.

ನನ್ನ ಹುಟ್ಟುಹಬ್ಬ ಅಂತಾ ಹೇಳಿ ಗಿಫ್ಟ್ ಕೊಡಬೇಕು ಅಂತಾ ಬಯಸಿದ್ದೇನೆ. ಯಾರಿಗೆ ಸಿಕ್ಕಿಲ್ಕ ಅವರಿಗೆ ಮುಟ್ಟಿಸುತ್ತೇನೆ. ಅಕೆ ಏನರೇ ಕೊಟ್ಟರೂ ನಾನು ಅದರ ಎರಡು ಪಟ್ಟು ಕೊಡುವವ. ಏನೇ ಆದರೂ ಆ ಕಡೆ ಹೋಗಬೇಡಿ ಎಂಬುದೊಂದೇ ನನ್ನ ವಿನಂತಿಯಾಗಿದೆ ಎಂದು ಹೇಳುವ ಮೂಲಕ ಮತದಾರರಿಗೆ ಬಹಿರಂಗ ಆಮೀಷವೊಡ್ಡಿದರು.

Related News

ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಅವರು ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ರೈಲಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು. ವಂದೇ ಭಾರತ್ ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣದಿಂದ ಅಸ್ಸಾಂನ ಗುವಾಹಟಿಗೆ ಹೊರಟಿದೆ. ಈ...

ಮಣಿಪುರದಲ್ಲಿ ಮತ್ತೆ ತಲೆ ಎತ್ತಿದ ಹಿಂಸಾಚಾರ ಪೊಲೀಸ್‌ ಸೇರಿದಂತೆ ಐವರು ಸಾವು

ಇಂಫಾಲ್‌: ಕಳೆದ ಕೆಲವು ದಿನಗಳಿಂದ ಸಹಜ ಸ್ಥಿತಿಗೆ ಮರಳುತ್ತಿದ್ದ ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಭಾನುವಾರ ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಪೊಲೀಸ್‌ ಸೇರಿದಂತೆ ಐವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಇದರಿಂದಾಗಿ ಕಳೆದ ಒಂದು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -