ಹಾವೇರಿ : ಗಣಪತಿ ಮೂರ್ತಿ ವಿಸರ್ಜನೆ ವೇಳೆ ಇಬ್ಬರು ಯುವಕರಿಗೆ ಚೂರಿಯಿಂದ ಇರಿದಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರಿನ ನಗರದಲ್ಲಿ ನಡೆದಿದೆ.
ಗಾಯಾಳು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಗಣಪತಿ ಮೆರವಣಿಗೆ ಸಮಯದಲ್ಲಿ ದುರ್ಗಾ ಸರ್ಕಲ್ ಗೆ ಬಂದಾಗ ಗಲಾಟೆ ನಡೆದಿದೆ. ದುರ್ಗಾ ವೃತ್ತದಲ್ಲಿರುವ ಮಸೀದಿ ಎದುರು ಜನರು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ನೂರಾರು ಪೊಲೀಸರು ಭೇಟಿ ನೀಡಿದ್ದು, ಪ್ರತಿಭಟನಾಕಾರರನ್ನು ಚದುರಿಸಲು ಲಾಠಿ ಪ್ರಹಾರ ಮಾಡಿದ್ದಾರೆ.