ತಮಿಳುನಾಡಿಗೆ ಕಾವೇರಿ ನೀರು ಬಿಡಲು CWMA ಆದೇಶ ವಿಚಾರ ಸಂಬಂಧ ರಾಮನಗರದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದರು.
ನೀರು ಹರಿಸದಿದ್ರೆ ಆದೇಶ ಉಲ್ಲಂಘನೆ ಅಂತಾ ಸಚಿವರು ಹೇಳಿದ್ದಾರೆ. ಜಲಸಂಪನ್ಮೂಲ ಸಚಿವರು ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಹಿಂದಿನ ಸರ್ಕಾರ ನೀರು ಬಿಟ್ಟಿಲ್ಲ ಅಂತಾ ಹೇಳಬಹುದು. ನೀರು ಬಿಟ್ಟಿದ್ದಾರೆ ಅನಿವಾರ್ಯತೆ ಇದೆ ಅದನ್ನು ಒಪ್ಪುತ್ತೇನೆ. ಆದರೆ ಮಳೆ ಕೊರತೆಯಿಂದ ನಮ್ಮ ರೈತರ ಬೆಳೆ ನಾಶವಾಗ್ತಿದೆ.
ರಾಜ್ಯ ಸರ್ಕಾರದ ನಡೆ ಖಂಡಿಸಿ ರೈತರು ಪ್ರತಿಭಟನೆ ಮಾಡ್ತಿದ್ದಾರೆ. ಕಾವೇರಿ ನದಿ ಸಂಬಂಧ ಸಭೆಗಳಲ್ಲಿ ತಮಿಳುನಾಡಿನ 10-15 ಅಧಿಕಾರಿಗಳು ಭಾಗಿಯಾಗ್ತಾರೆ. ಆದರೆ ನಮ್ಮ ಅಧಿಕಾರಿಗಳು ಒಬ್ಬರೋ ಇಬ್ಬರೂ ಕಾಟಾಚಾರಕ್ಕೆ ಭಾಗಿಯಾಗುತ್ತಿದ್ದಾರೆ ಎಂದರು.
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ. ಕೇವಲ ಒಂದು ಸಮುದಾಯದ ಬೆಂಬಲದಿಂದ ಅಧಿಕಾರಕ್ಕೇರಿಲ್ಲ. ಎಲ್ಲಾ ಸಮಾಜದವರೂ ಸರಕಾರದೊಂದಿಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್...
ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರ ಸ್ಥಿರ ಆಸ್ತಿಗಳು ಮಾರ್ಗಸೂಚಿ ಬೆಲೆ ಪರಿಷ್ಕರಣೆ ಅಕ್ಟೋಬರ್ ಒಂದರಿಂದ ಶೆ. 10%ರಿಂದ 30%ವರೆಗೆ ಹೆಚ್ಚಳ ಮಾಡುವುದಾಗಿ ಆದೇಶ ಹೊರಡಿಸಿದೆ.
ಅದರ ಅಂಗವಾಗಿ ಬೆಳಗಾವಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ...