spot_img
spot_img
spot_img
spot_img
spot_img
spot_img
spot_img
spot_img
23.1 C
Belagavi
Thursday, September 28, 2023
spot_img

ನಾವು ಯಾರು ಚೈತ್ರಾಳ ಬೆಂಬಲಕ್ಕೆ ನಿಂತಿಲ್ಲ

ಉಡುಪಿ: ನಾವು ಯಾರೂ ಕೂಡ ಚೈತ್ರಾ ಕುಂದಾಪುರಳ ಬೆಂಬಲಕ್ಕೆ ನಿಂತಿಲ್ಲ. ನಾವು ಯಾರೂ ಅವಳನ್ನು ರಕ್ಷಣೆ ಮಾಡುತ್ತಿಲ್ಲ. ಯಾರು ತಪ್ಪು ಮೋಸ ಮಾಡಿದ್ರು ಕೂಡ ಶಿಕ್ಷೆ ಆಗಲೇಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಬಿಜೆಪಿ ಟಿಕೆಟ್ ಡೀಲ್ ಸಂಬಂಧ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಚೈತ್ರಾ ಕುಂದಾಪುರ ಟೀಂ ಸಿಸಿಬಿ ವಶದಲ್ಲಿದೆ. ಈ ಬಗ್ಗೆ ರಾಜ್ಯ ಸರ್ಕಾರ ಸಮಗ್ರ ತನಿಖೆ ಮಾಡಲಿ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇಬೇಕು. ನನಗೂ ಚೈತ್ರಾ ಕುಂದಾಪುರಳಿಗೂ ಯಾವುದೇ ಸಂಬಂಧ ಇಲ್ಲ. ಕಾರ್ಯಕ್ರಮದಲ್ಲಿ ಸಿಕ್ಕಾಗ ಫೋಟೋ ತೆಗೆದುಕೊಂಡಿರಬಹುದು. ಕಾಸು ಕೊಟ್ಟು ಟಿಕೆಟ್ ಪಡೆಯುವ ಸಂಪ್ರದಾಯ ಬಿಜೆಪಿಯಲ್ಲಿ ಇಲ್ಲ ಎಂದರು.

ಚೈತ್ರಾ ಕುಂದಾಪುರ ಅರೆಸ್ಟ್ ಆಗಿರುವುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಚೈತ್ರಾ ಕುಂದಾಪುರದ ವೈಯಕ್ತಿಕ ಸಂಪರ್ಕ ನನಗೆ ಇರಲಿಲ್ಲ. ಕಾರ್ಯಕ್ರಮಗಳಲ್ಲಿ ಸಿಕ್ಕಾಗ ಫೋಟೋ ತೆಗೆದಿರಬಹುದು ಗೊತ್ತಿಲ್ಲ. ರಾಜಕೀಯ ಸಾಮಾಜಿಕ ಜೀವನದಲ್ಲಿ ಯಾರೇ ತಪ್ಪು ಮಾಡಿದ್ರೂ ಶಿಕ್ಷೆ ಆಗಬೇಕು. ಪ್ರಕರಣದ ಕುರಿತು ತನಿಖೆ ಆಗುತ್ತಿದೆ ನಿಷ್ಪಕ್ಷವಾಗಿ ತನಿಖೆಯಾಗಲಿ. ತಪ್ಪು ಮಾಡಿದ್ರೆ ಶಿಕ್ಷೆ ಆಗಲಿ ತಪ್ಪು ಮಾಡದೆ ಇದ್ದರೆ ಅನಾವಶ್ಯಕವಾಗಿ ತೊಂದರೆ ಕೊಡುವುದು ಬೇಡ ಎಂದು ರಾಜ್ಯ ಸರ್ಕಾರಕ್ಕೆ ಶೋಭಾ ಕರಂದ್ಲಾಜೆ ಮನವಿ ಮಾಡಿಕೊಂಡರು.

Related News

ಬೆಳಗಾವಿಯಲ್ಲಿ ಅದ್ದೂರಿ ಗಣೇಶ ವಿಸರ್ಜನೆ

ಬೆಳಗಾವಿ: 10 ದಿನಗಳ ಗಣಪತಿ ಭಕ್ತರ ಆತಿತ್ಯವನ್ನು ಸ್ವೀಕರಿಸಿ ಇಂದು ನಿರ್ಗಮನ ವಾಗುತ್ತಿದ್ದಾನೆ. ಗಣಪತಿ ಭಕ್ತರು ಹತ್ತು ದಿನಗಳವರೆಗೆ ವಿವಿಧ ಸೇವೆ ಸಲ್ಲಿಸಿ ಗಣಪತಿಯ ಅನುಗ್ರಹಕ್ಕೆ ಪಾತ್ರರಾಗಿರುತ್ತಾರೆ. ಬೆಳಗಾವಿ ನಗರಕ್ಕೆ ಗಣಪತಿ ಆಗಮನ...

ಹಾಕಿ ಆಸ್ಟ್ರೋಟರ್ಫ್ ಮೈದಾನಕ್ಕೆ ಬೇಡಿಕೆ ಜನತಾ ದರ್ಶನದಲ್ಲಿ ಹೇಳಿಕೆ: ಭರವಸೆ

ಬೆಳಗಾವಿ: ಭಾರತಕ್ಕೆ ನಾಲ್ವರು ಒಲಂಪಿಕ್ ಹಾಕಿ ಆಟಗಾರರನ್ನು ನೀಡಿದ್ದು, ಕರ್ನಾಟಕ ಸರಕಾರ ಬೆಳಗಾವಿಗೆ ಅಂತರಾಷ್ಟ್ರೀಯ ಗುಣಮಟ್ಟದ ಹಾಕಿ ಮೈದಾನವನ್ನು ಇನ್ನೂ ನೀಡಿಲ್ಲ, ಅದಕ್ಕಾಗಿ ಜಿಲ್ಲಾಡಳಿತ ಕೂಡಲೇ ಬೆಳಗಾವಿ ಹಾಕಿ ಸಂಸ್ಥೆಯ ಆಸ್ಟ್ರೋಟರ್ಫ್ ಮೈದಾನದ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -