ಇದೆಂತಾ ನಾಚಿಕೆಗೇಡಿ ಕೆಲಸ, ಮಹಿಳೆಯನ್ನು ವಿವಸ್ತ್ರಗೊಳಿಸಿ ದೇಶವೇ ತಲೆ ತಗ್ಗಿಸುವಂತೆ ಮಾಡಿದ ಆರೋಪಿ ಬಿಡುಗಡೆಗೆ ಅದ್ದೂರಿ ಸ್ವಾಗತ...

Apr 23, 2024 - 09:22
 31
Google  News Join WhatsApp Join Telegram Live

ಇದೆಂತಾ ನಾಚಿಕೆಗೇಡಿ ಕೆಲಸ, ಮಹಿಳೆಯನ್ನು ವಿವಸ್ತ್ರಗೊಳಿಸಿ ದೇಶವೇ ತಲೆ ತಗ್ಗಿಸುವಂತೆ ಮಾಡಿದ ಆರೋಪಿ ಬಿಡುಗಡೆಗೆ ಅದ್ದೂರಿ ಸ್ವಾಗತ...

Panchayat Swaraj Samachar News Desk.

ಬೆಳಗಾವಿ: ಕಳೆದ ವರ್ಷ ಡಿಸೆಂಬರ್ನಲ್ಲಿ ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣ ದೇಶಾದ್ಯಂತ ಸುದ್ದಿಯಾಗಿದ್ದು, ರಾಜ್ಯ ತಲೆ ತಗ್ಗಿಸುವಂತೆ ಮಾಡಿತ್ತು. ಮಹಿಳೆಯನ್ನು ವಿವಸ್ತ್ರಗೊಳಿಸಿ, ಹಲ್ಲೆ ಮಾಡಿದ್ದ ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ಆರೋಪಿಗಳು ನಾಲ್ಕು ತಿಂಗಳ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಬಿಡುಗಡೆಯಾಗುತ್ತಿದ್ದಂತೆ ಆರೋಪಿಗಳಿಗೆ ಹೂವಿನ ಹಾರ ಹಾಕಿ, ಸಿಹಿ ತಿನ್ನಿಸಿ ಅದ್ಧೂರಿಯಾಗಿ ಸ್ವಾಗತ ಮಾಡಿದ್ದು, ನಾಚಿಕೆಗೇಡಿನ ಸಂಗತಿಯಾಗಿದೆ.

ಪ್ರೀತಿ ವಿಚಾರವಾಗಿ 2023ರ ಡಿಸೆಂಬರ್ 10 ರಂದು ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವಾಗಲೇ, ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ, ಮೆರವಣಿಗೆ ಮಾಡಿ ಬಳಿಕ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಲಾಗಿತ್ತು. ಪ್ರಕರಣ ಸಂಬಂಧ ಕಾಕತಿ ಠಾಣೆ ಪೊಲೀಸರು 13 ಆರೋಪಿಗಳನ್ನ ಬಂಧಿಸಿ, ಹಿಂಡಲಗಾ ಜೈಲಿನಲ್ಲಿ ಇರಸಿದ್ದರು. ಇದೀಗ ಹೈಕೋರ್ಟ್‌ ಎಲ್ಲ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಿದೆ. ಹೀಗಾಗಿ ಆರೋಪಿಗಳು ಸೋಮವಾರ ರಾತ್ರಿ ಜೈಲಿನಿಂದ ಬಿಡುಗಡೆಯಾದರು.

ಜೈಲಿನ ಎದುರೇ ಪ್ರಮುಖ ಆರೋಪಿ ಬಸಪ್ಪ ನಾಯ್ಕ್‌ಗೆ ಹೂಮಾಲೆ ಹಾಕಿ, ಸಿಹಿ ತಿನಿಸಿ ಸ್ವಾಗತಿಸಲಾಯಿತು. ಅಲ್ಲದೇ ಆರೋಪಿಗಳನ್ನು ವಂಟಮೂರಿ ಗ್ರಾಮದಲ್ಲಿ ಮೆರವಣಿಗೆ ಮಾಡಲು ಆರೋಪಿಯ ಬೆಂಬಲಿಗರು ಮುಂದಾಗಿದ್ದರು. ಪೊಲೀಸರು ಅವಕಾಶ ನೀಡದ ಹಿನ್ನೆಲೆಯಲ್ಲಿ ಮೆರವಣಿಗೆ ಕೈ ಬಿಟ್ಟು ಪಟಾಕಿ ಸಿಡಿಸಿ ವಿಕೃತ ಮನಸ್ಸುಗಳು ಸಂಭ್ರಮಿಸಿದ್ದಾರೆ. ಜೈಲಿನ ಎದುರು ನಡೆದ ಸಂಭ್ರಮದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

Google News Join Facebook Live 24/7 Help Desk

Tags: