ಎಷ್ಟೇ ಪ್ರಯತ್ನಿಸಿದ್ರೂ ಮಣಿಪುರವನ್ನು ಒಡೆಯಲು ಬಿಡಲ್ಲ: ಅಮಿತ್ ಶಾ

Apr 15, 2024 - 20:27
 39
Google  News Join WhatsApp Join Telegram Live

ಎಷ್ಟೇ ಪ್ರಯತ್ನಿಸಿದ್ರೂ ಮಣಿಪುರವನ್ನು ಒಡೆಯಲು ಬಿಡಲ್ಲ: ಅಮಿತ್ ಶಾ

Panchayat Swaraj Samachar News Desk.

ಇಂಫಾಲ: ಮಣಿಪುರವನ್ನು ಒಡೆಯುವ ಪ್ರಯತ್ನ ಮಾಡಲಾಗುತ್ತಿದ್ದು, ರಾಜ್ಯವನ್ನು ಒಡೆಯುವ ಮತ್ತು ಒಗ್ಗೂಡಿಸುವ ಶಕ್ತಿ ಈ ಚುನಾವಣೆಗಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದ್ದಾರೆ.

ಇಂಫಾಲದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಮಣಿಪುರಕ್ಕೆ ಒಳನುಸುಳುವಿಕೆಯ ಪ್ರಯತ್ನಗಳು ನಡೆಯುತ್ತಿದ್ದು, ರಾಜ್ಯವನ್ನು ಒಡೆಯುವ ಪ್ರಯತ್ನ ಮಾಡಲಾಗುತ್ತಿದೆ. ಎಷ್ಟೇ ಪ್ರಯತ್ನಿಸಿದರೂ ನಾವು ಮಣಿಪುರವನ್ನು ಒಡೆಯಲು ಬಿಡುವುದಿಲ್ಲ ಎಂದರು. ಈ ಮೂಲಕ ಅವರು ಮಣಿಪುರದಲ್ಲಿ ಶಾಂತಿ ಸ್ಥಾಪನೆಗೆ ಪ್ರತಿಜ್ಞೆ ಮಾಡಿದ್ದಾರೆ. 

ಮಣಿಪುರದಲ್ಲಿ ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸಿ ಮತ್ತು ರಾಜ್ಯವನ್ನು ಒಡೆಯದೆ ಶಾಂತಿ ಸ್ಥಾಪನೆ ಮಾಡುವುದು ನರೇಂದ್ರ ಮೋದಿ ಸರ್ಕಾರದ ಆದ್ಯತೆಯಾಗಿದೆ. ಬಿಜೆಪಿ ಮಣಿಪುರವನ್ನು ಬಲಪಡಿಸಿದೆ. ಮಣಿಪುರದ ಭವಿಷ್ಯ ಬದಲಾದಾಗ ದೇಶದ ಭವಿಷ್ಯ ಬದಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಮಣಿಪುರದ ಪರಿಸ್ಥಿತಿಯ ಬಗ್ಗೆ ಇತ್ತೀಚೆಗೆ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರು ಮಣಿಪುರದ ಪರಿಸ್ಥಿತಿಯಲ್ಲಿ ಗಮನಾರ್ಹ ಬದಲಾವಣೆಯಾಗಿದೆ. ಕೇಂದ್ರ ಸರಿಯಾದ ಸಮಯದಲ್ಲಿ ಮಧ್ಯಸ್ಥಿಕೆ ವಹಿಸಿ ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಮಾಡಿದೆ ಎಂದಿದ್ದರು.

Google News Join Facebook Live 24/7 Help Desk

Tags: