ಒಂದೇ ಕುಟುಂಬದ 8 ಜನರಿದ್ದ ಕಾರಿಗೆ ಬೆಂಕಿ – ಹುಡುಗಿ ಸಜೀವ ದಹನ

Apr 22, 2024 - 09:56
 58
Google  News Join WhatsApp Join Telegram Live

ಒಂದೇ ಕುಟುಂಬದ 8 ಜನರಿದ್ದ ಕಾರಿಗೆ ಬೆಂಕಿ – ಹುಡುಗಿ ಸಜೀವ ದಹನ

Panchayat Swaraj Samachar News Desk.

ಬೆಂಗಳೂರು: ನೆಲಮಂಗಲದ ಮಾದಾವರ ಬಳಿ ಭಾರೀ ಅಪಘಾತ ಸಂಭವಿಸಿದೆ. ಸಹೋದರನ ಮನೆಯಿಂದ ಊಟ ಮುಗಿಸಿ ಬರುತ್ತಿದ್ದಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಹುಡುಗಿಯೊಬ್ಬಳು ಸುಟ್ಟು ಕರಕಲಾದ ದಾರುಣ ಘಟನೆ ನಡೆದಿದೆ.

ಬೆಂಗಳೂರು- ತುಮಕೂರು ಹೈವೆಯ ಮಾದಾವರ ಟೋಲ್ ಬಳಿ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಓಮ್ನಿ ಕಾರಿಗೆ ಬಲೆನೋ ಕಾರು ಹಿಂಬದಿಯಿಂದ ಡಿಕ್ಕಿಯೊಡೆದ ಪರಿಣಾಮ ಓಮ್ನಿ‌ಕಾರು ಪಲ್ಟಿಯಾಗಿ ಬೆಂಕಿಗಾಹುತಿಯಾಗಿದೆ. ಕಾರಿನಲ್ಲಿ ಒಟ್ಟು 8 ಜನ ಪ್ರಯಾಣ ಮಾಡ್ತಿದ್ರು. ಏಳು ಜನಕ್ಕೆ ಸುಟ್ಟ ಗಾಯಗಳಾಗಿದ್ರೇ 15 ವರ್ಷದ ಹುಡುಗಿಯೊಬ್ಬಳು ಸಜೀವ ದಹನವಾಗಿದ್ದಾಳೆ.

ಓಮ್ನಿ ಕಾರಿನಲ್ಲಿ ಪ್ರಯಾಣ ಮಾಡ್ತಿದ್ದ 8 ಜನರಲ್ಲಿ ದಿವ್ಯಾ ಸಾವನ್ನಪ್ಪಿದ್ರೆ ಮಾಯಾಂಕ್, ಮಂಜುಳ, ಸುನಿತಾ, ತರುಣ್, ಮಹೇಶ್, ನಮನ್ ಹಾಗೂ ಶಾಂತಿಲಾಲ್ ಗಾಯಾಳುಗಳಾಗಿದ್ದಾರೆ. ಇವರಲ್ಲಿ ನಮನ್, ಸುನಿತಾ, ಮಾಯಾಂಕ್ ಸ್ಥಿತಿ ಗಂಭೀರವಾಗಿದೆ. ಮಾದಾವರದ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳುಗಳೆಲ್ಲರೂ ಗುಜರಾತಿ ಮೂಲದ ಕುಟುಂಬದವರು.

ಸ್ಥಳಕ್ಕೆ ಬೇಟಿ ಕೊಟ್ಟು ಪರಿಶೀಲನೆ ನಡೆಸಿದ ಬೆಂಗಳೂರು ಗ್ರಾಮಾಂತರ ಎಸ್. ಪಿ ಮಲ್ಲಿಕಾರ್ಜುನ್ ಬಾಲಾದಂಡಿ ನಂತರ ಘಟನೆಯ ವಿವರ ನೀಡಿದ್ರು. ತುಮಕೂರು ರಸ್ತೆ ಹೈವೇಯಲ್ಲಿ 10ಗಂಟೆ ರಾತ್ರಿಯಲ್ಲಿ ಘಟನೆ ನಡೆದಿದೆ. ಬಲೆನೋ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಮುಂದಿದ್ದ ಕಾರು ಎರಡು ಮೂರು ಪಲ್ಟಿ ಆಗಿದ್ದು ನಂತರ ಬೆಂಕಿ ಹತ್ತಿಕೊಂಡಿದೆ.

Google News Join Facebook Live 24/7 Help Desk

Tags: