ಕಾಂಗ್ರೆಸ್ ಪ್ರಣಾಳಿಕೆ ಪಾಕ್ ಚುನಾವಣೆಗೆ ಹೆಚ್ಚು ಸೂಕ್ತವಾಗಿದೆ: ಹಿಮಂತ್ ಶರ್ಮಾ
Google News | Join WhatsApp | Join Telegram | Live |
Panchayat Swaraj Samachar News Desk.
ಅಸ್ಸಾಂ: ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯು ಪಾಕಿಸ್ತಾನದ ಚುನಾವಣೆಗೆ ಹೆಚ್ಚು ಸೂಕ್ತವಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ವಾಗ್ದಾಳಿ ನಡೆಸಿದ್ದಾರೆ.
ಜೋರ್ಹತ್ ಕ್ಷೇತ್ರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಪ್ರತಿಕ್ರಿಯಿಸಿದರು. ಭಾರತಕ್ಕಿಂತ ಪಾಕಿಸ್ತಾನದಲ್ಲಿ ನಡೆಯುವ ಚುನಾವಣೆಗಳಿಗೆ ಹೆಚ್ಚು ಸೂಕ್ತವೆಂದು ಆರೋಪಿಸಿದ್ದಾರೆ. ಪ್ರಣಾಳಿಕೆಯು ಅಧಿಕಾರಕ್ಕೆ ಬರಲು ಸಮಾಜವನ್ನು ಒಡೆಯುವ ಗುರಿಯನ್ನು ಹೊಂದಿದೆ ಎಂದು ಅವರು ಕಿಡಿಕಾರಿದರು.
ಇದು ತುಷ್ಟೀಕರಣದ ರಾಜಕೀಯ ಮತ್ತು ನಾವು ಇದನ್ನು ಖಂಡಿಸುತ್ತೇವೆ. ಪ್ರಣಾಳಿಕೆಯು ಭಾರತದಲ್ಲಿ ಚುನಾವಣೆಗಾಗಿ ಅಲ್ಲ ಪಾಕಿಸ್ತಾನಕ್ಕೆ ಎಂದು ಭಾಸವಾಗುತ್ತಿದೆ ಎಂದು ಹೇಳಿದರು.
ಹಿಂದೂ ಅಥವಾ ಮುಸ್ಲಿಂ ಯಾವುದೇ ವ್ಯಕ್ತಿ ತ್ರಿವಳಿ ತಲಾಖ್, ಬಹುಪತ್ನಿತ್ವ ಹಾಗೂ ಬಾಲ್ಯ ವಿವಾಹವನ್ನು ಬೆಂಬಲಿಸುವುದಿಲ್ಲ. ಸಮಾಜವನ್ನು ಒಡೆದು ಅಧಿಕಾರಕ್ಕೆ ಬರುವುದು ಕಾಂಗ್ರೆಸ್ನ ಮನಸ್ಥಿತಿಯಾಗಿದೆ ಎಂದು ಕಿಡಿಕಾರಿದರು.
Google News | Join Facebook | Live | 24/7 Help Desk |