ಕೆಲಸ ಮಾಡುವವರಿಗೆ ಮಾತ್ರ ಮತ ಹಾಕಿ- ಕೈ ಅಭ್ಯರ್ಥಿಯಿಂದ ವಿಭಿನ್ನ ಪ್ರಚಾರ
Google News | Join WhatsApp | Join Telegram | Live |
Panchayat Swaraj Samachar News Desk.
ದಾವಣಗೆರೆ: ರಾಜ್ಯದಲ್ಲಿ ಚುನಾವಣಾ ಕಣ ರಂಗೇರುತ್ತಿದೆ. ಅಭ್ಯರ್ಥಿಗಳು ತಮ್ಮದೇ ರೀತಿಯಲ್ಲಿ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಅಂತೆಯೇ ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯೊಬ್ಬರು ವಿಭಿನ್ನವಾಗಿ ಚುನಾವಣಾ ಪ್ರಚಾರವನ್ನು ಮಾಡಿ ಗಮನಸೆಳೆದಿದ್ದಾರೆ.
ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಅವರು ವಿಶೇಷವಾಗಿ ಚುನಾವಣಾ ಪ್ರಚಾರ ಮಾಡಿ ಗಮನಸೆಳೆದವರಾಗಿದ್ದಾರೆ. ಇವರು ಇಂದು ನಗರ ಸಾರಿಗೆ ಬಸ್ ನಲ್ಲಿ ಹೋಗಿ ಪ್ರಚಾರ ಮಾಡಿದ್ದಾರೆ. ಸದ್ಯ ಈ ರೀತಿ ವಿನೂತನವಾಗಿ ಚುನಾವಣಾ ಪ್ರಚಾರ ಮಾಡಿರುವ ಪ್ರಭಾ ಅವರ ವೀಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.
ನಗರ ಸಾರಿಗೆ ಬಸ್ಸಿನಲ್ಲಿ ಆಧಾರ್ ಕಾರ್ಡ್ ತೋರಿಸಿ ಜನರ ಜೊತೆ ಪ್ರಯಾಣ ಮಾಡಿ, ಶಕ್ತಿ ಯೋಜನೆ ಬಗ್ಗೆ ಕೂಡ ಪ್ರಚಾರ ನಡೆಸಿರುವ ಪ್ರಭಾ ಅವರು ಕೆಲಸ ಮಾಡುವವರಿಗೆ ಮಾತ್ರ ಮತ ಹಾಕಿ. ಈ ಬಾರಿ ಕಾಂಗ್ರೆಸ್ ಗೆಲ್ಲಿಸಿ ಅಭಿವೃದ್ಧಿಗೆ ಸಹಕಾರ ನೀಡಿ ಎಂದು ಹೇಳಿದ್ದಾರೆ.
Google News | Join Facebook | Live | 24/7 Help Desk |