ಗೋಕಾಕ, ಅರಬಾವಿಯಲ್ಲಿ ಕಾಂಗ್ರೆಸ್ ಗೆ ಭರ್ಜರಿ ರೆಸ್ಪಾನ್ಸ್: ಬಿಜೆಪಿ ವಿರುದ್ಧ ಸತೀಶ್ ಜಾರಕಿಹೊಳಿ ವಾಗ್ದಾಳಿ

Mar 28, 2024 - 18:28
 22
Google  News Join WhatsApp Join Telegram Live

ಗೋಕಾಕ, ಅರಬಾವಿಯಲ್ಲಿ ಕಾಂಗ್ರೆಸ್ ಗೆ ಭರ್ಜರಿ ರೆಸ್ಪಾನ್ಸ್: ಬಿಜೆಪಿ ವಿರುದ್ಧ ಸತೀಶ್ ಜಾರಕಿಹೊಳಿ ವಾಗ್ದಾಳಿ

Panchayat Swaraj Samachar News Desk.

ಬೆಳಗಾವಿ: ಬಿಜೆಪಿಯವರು ಮೋದಿ ಗ್ಯಾರಂಟಿ ಮೋದಿ ಗ್ಯಾರಂಟಿ ಎನ್ನುತ್ತಿದ್ದಾರೆ. ಮೋದಿ ನಾನೇ ಗ್ಯಾರಂಟಿ ಎನ್ನುತ್ತಿದ್ದಾರೆ. ಇವರ ಮೇಲೆ ಯಾವ ಗ್ಯಾರಂಟಿ ಇಟ್ಟುಕೊಳ್ಳಲು ಸಾಧ್ಯ? ಇಲ್ಲಿಯವರೆಗೆ ನೀಡಿದ್ದ ಆಶ್ವಾಸನೆಗಳಲ್ಲಿ ಯಾವುದನ್ನು ಈಡೇರಿಸಿದ್ದಾರೆ? ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗೋಕಾಕ ಮತ್ತು ಅರಬಾವಿ ವಿಧಾನ ಸಭಾ ಕ್ಷೇತ್ರದ ಕಾರ್ಯಕರ್ತರ ಸಭೆಯನ್ನುದ್ಧೇಶಿಸಿ ಅವರು ಮಾತನಾಡುತ್ತಿದ್ದರು.

ಕಾಂಗ್ರೆಸ್ ಸರಕಾರದ ಭರವಸೆ ನೀಡಿದ್ದ ಎಲ್ಲ ಗ್ಯಾರಂಟಿಗಳನ್ನು ಈಡೇರಿಸಿದೆ. ಅವುಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವ ಕೆಲಸವನ್ನೂ ಮಾಡಿದೆ. ಎಲ್ಲ ಗ್ಯಾರಂಟಿಗಳಿಂದಲೂ ಜನರಿಗೆ ಪ್ರಯೋಜನವಾಗಿದೆ. ಹಾಗಾಗಿ ಈ ಬಾರಿ ಎಲ್ಲರೂ ಒಂದಾಗಿ ಕೆಲಸ ಮಾಡಬೇಕು. ಕೇಂದ್ರದಲ್ಲಿ ನಮ್ಮ ಸರಕಾರ ಅಧಿಕಾರಕ್ಕೆ ಬರುವಂತೆ ಮಾಡಬೇಕು ಎಂದು ಅವರು ಹೇಳಿದರು.

ಕೇವಲ ಭಾವನೆಗಳ ಮೇಲೆ ಜನರು ಬದುಕಲು ಸಾಧ್ಯವಿಲ್ಲ. ಬಿಜೆಪಿಯವರ ಯೋಜನೆಗಳು ಕೇವಲ ಘೋಷಣೆ ಮಾಡುವುದಕ್ಕೆ ಮಾತ್ರ ಸೀಮಿತ. ಅವುಗಳು ಎಂದಿಗೂ ಜಾರಿಯಾಗುವುದಿಲ್ಲ. ದೇಶದಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿಯಾಗಬೇಕು. ಅದು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ. ಹಾಗಾಗಿ ಉತ್ಸಾಹಿ ಯುವಕರಾಗಿರುವ ಮೃಮಾಲ ಹೆಬ್ಬಾಳಕರ್ ಅವರಿಗೆ ಮತ ನೀಡಿ ಬಹುಮತದಿಂದ ಆರಿಸಿಕಳಿಸಿ ಎಂದು ವಿನಂತಿಸಿದರು.

Google News Join Facebook Live 24/7 Help Desk

Tags: