ಗೋಕಾಕ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಪರವಾಗಿ ಸಚಿವ ಸತೀಶ್ ಜಾರಕಿಹೊಳಿ ಪ್ರಚಾರ

Apr 27, 2024 - 12:00
 43
Google  News Join WhatsApp Join Telegram Live

ಗೋಕಾಕ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಪರವಾಗಿ ಸಚಿವ ಸತೀಶ್ ಜಾರಕಿಹೊಳಿ ಪ್ರಚಾರ

Panchayat Swaraj Samachar News Desk.

 ಗೋಕಾಕ: ನಗರದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಪರವಾಗಿ ಪ್ರಚಾರ ಪ್ರಾರಂಭಿಸಿ ಕೇಂದ್ರ ಸರ್ಕಾರದ ವಿಫಲಗಳು ಹಾಗೂ ಬಿಜೆಪಿ ನಡೆಸುತ್ತಿರುವ ಸುಳ್ಳು ಪ್ರಚಾರವನ್ನು ನಂಬಬೇಡಿ. ಕಾಂಗ್ರೆಸ್ ಪಕ್ಷ ಬಡವರ ಪಕ್ಷ, ಬಡವರ ಪರವಾಗಿ ಚಿಂತನೆ ನಡೆಸುವ ಪಕ್ಷ.

2023ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಭರವಸೆ ನೀಡಿದ್ದೆವು,ಈಗ ಐದು ಗ್ಯಾರಂಟಿಗಳ ಮುಖಾಂತರ ರಾಜ್ಯದ ಯಾವುದೇ ಬೇದ ಭಾವವಿಲ್ಲದೆ ಎಲ್ಲರಿಗೂ ಐದು ಗ್ಯಾರಂಟಿಗಳು ತಲುಪಿಸುತ್ತಾ ಇದ್ದೇವೆ .

 ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದರೆ ವಿವಿಧ ಜನಪರ ಯೋಜನೆಗಳನ್ನು ಹಮ್ಮಿಕೊಳ್ಳಲಿದ್ದೇವೆ.

ಮಹಿಳೆಯರ ಗೋಸ್ಕರ ಒಂದು ಲಕ್ಷ ರೂಪಾಯಿ ಆರ್ಥಿಕ ಸಹಾಯ ನೀಡಲಿದ್ದೇವೆ. ಅದಕ್ಕಾಗಿ ನಾವು ಗ್ಯಾರಂಟಿ ಪತ್ರವನ್ನು ಮತದಾರರಿಗೆ ನೀಡುತ್ತಾ ಇದ್ದೇವೆ ಎಂದರು.

ಈ ಸಂದರ್ಭದಲ್ಲಿ ಸಚಿವರು ಗೋಕಾಕ್ ನಗರದ ಗಲ್ಲಿಗಳಲ್ಲಿ ಸಂಚರಿಸಿ ತನ್ನ ಸ್ನೇಹಿತರಿಗೆ ಹಾಗೂ ಜನರಿಗೆ ಕಾಂಗ್ರೆಸ್ ಪರ ಮತ ಚಲಾಯಿಸಬೇಕೆಂದು ಕೇಳುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು,

ಸಚಿವ ಸತೀಶ್ ಜಾರಕಿಹೊಳಿ ಅವರ ಸರಳತೆಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಕಾರ್ಯಕರ್ತರು ಅವರ ಜೊತೆ ಸಾಥ ನೀಡಿದರು.

Google News Join Facebook Live 24/7 Help Desk

Tags: