ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ಜಾರಕಿಹೊಳಿ ಭರ್ಜರಿ ಪ್ರಚಾರ

Mar 30, 2024 - 12:34
 92
Google  News Join WhatsApp Join Telegram Live

ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ಜಾರಕಿಹೊಳಿ ಭರ್ಜರಿ ಪ್ರಚಾರ

Panchayat Swaraj Samachar News Desk.

ಬೆಳಗಾವಿ: ಅಗಸಗಾ,ಕೇದನೂರ ಹಂದಿಗನೂರ್ ಹಾಗೂ ಕಡೋಲಿ ಗ್ರಾಮ ಪಂಚಾಯತ್ ಪ್ರದೇಶಗಳಲ್ಲಿ ಪ್ರಿಯಾಂಕ ಜಾರಕಿಹೊಳಿ ಭರ್ಜರಿ ಪ್ರಚಾರ ಪ್ರಾರಂಭಿಸಿದರು.

ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆದ ಪ್ರಿಯಾಂಕ ಜಾರಕಿಹೊಳಿ ಅವರಿಗೆ ಗ್ರಾಮಸ್ಥರು ಅದ್ದೂರಿ ಸ್ವಾಗತ ನೀಡಿದರು. ಮಹಿಳೆಯರು ಆರತಿ ಮಾಡಿ ಅವರಿಗೆ ಆತ್ಮೀಯವಾಗಿ ಬರಮಾಡಿಕೊಂಡರು.

ಇದೇ ಸಂದರ್ಭದಲ್ಲಿ ಮಾತನಾಡಿದ ಪ್ರಿಯಾಂಕಾ ಜಾರಕಿಹೊಳಿ ಕಾಂಗ್ರೆಸ್ ಪಕ್ಷ ಬಡವರ ಪಕ್ಷ ಬಡವರಗಾಗಿ ಸತತವಾಗಿ ಕಾರ್ಯನಿರ್ವಹಿಸುತ್ತಿದೆ. ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿ ನುಡಿದಂತೆ ನಡೆದಿದ್ದಾರೆ. ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ ಯೋಜನೆ ಯುವ ನಿಧಿ, ಉಚಿತ ಯುದ್ಯುತ ಈ ಯೋಜನೆಗಳಿಂದಾಗಿ ಬೆಲೆ ಏರಿಕೆಯ ಯಿಂದಗಿ ಬಡವರು ಕಷ್ಟದಲ್ಲಿ ಸಿಕ್ಕಿದ್ದರು. ಅವರಿಗೆ ಈ ಯೋಜನೆಗಳು ಕಷ್ಟದ ಸಮಯದಲ್ಲಿ ಬಡುವರ ಸಹಾಯಕವಾಗಿ ನಿಂತಿವೆ. ಕರೋನ ಕಾಲಾವಧಿಯಲ್ಲಿ ಕೇಂದ್ರ ಸರ್ಕಾರ ನೆರವಿಗೆ ಬರಲಿಲ್ಲ ಪ್ರವಾಹ ಸಂದರ್ಭದಲ್ಲಿ ಹಾಗೂ ಈ ಬರಗಾಲದ ಸಂದರ್ಭದಲ್ಲಿ ಕೂಡ ಕೇಂದ್ರ ನೆರವಿಗೆ ಬರಲಿಲ್ಲ. ಕಾಂಗ್ರೆಸ್ ಪಕ್ಷ ಪ್ರತಿ ಸಂದರ್ಭದಲ್ಲಿ ಬಡ ಜನತೆ ಮತ್ತು ಜನತೆಯ ಪರವಾಗಿ ನಿಂತಿದೆ.

 ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ನಮ್ಮ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ಇನ್ನೂ ಅನೇಕ ಬಡವರ ಪರವಾಗಿ ಯೋಜನೆಗಳು ಅನುಷ್ಠಾನ ಮಾಡಲ ಭರವಸೆ ನೀಡಿದ್ದಾರೆ. ಅಭಿವೃದ್ಧಿ ವಿಷಯವಾಗಿ ಹೇಳಬೇಕಾದರೆ ಪಿ ಡಬ್ಲ್ಯೂ ಡಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಅನೇಕ ಅಭಿವೃದ್ಧಿ ಕಾಮಗಾರಿಗಳ ಚಾಲನೆ ನೀಡಿದ್ದಾರೆ. ಅನುದಾನಗಳನ್ನು ತಂದು ಈ ಕ್ಷೇತ್ರ ಹಾಗೂ ರಾಜ್ಯದ ಅಭಿವೃದ್ಧಿಗೋಸ್ಕರ ಶ್ರಮಿಸುತ್ತಿದ್ದಾರೆ ಪ್ರಿಯಾಂಕ ಜಾರಕಿಹೊಳಿ ತಮ್ಮ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳು ಮತ್ತು ಯೋಜನೆಗಳು ಕುರಿತು ಜನರಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರಾದ ಮಲಗೌಡ ಪಾಟೀಲ್ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಪದಾಧಿಕಾರಿಗಳು ಉಪಸ್ಥಿತರಿದ್ದರು

Google News Join Facebook Live 24/7 Help Desk

Tags: