ಚಿಲ್ಲರೆ ಹೇಳಿಕೆಗಳಿಗೆ ಪ್ರತಿಕ್ರಿಯಿಸಲ್ಲ
Google News | Join WhatsApp | Join Telegram | Live |
Panchayat Swaraj Samachar News Desk.
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಡಿಕೆ ಶಿವಕುಮಾರ್ ಕೆಂಡಾಮಂಡಲ ಆಗದ್ದು ಚಿಲ್ಲರೆ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಲ್ಲ ಎಂದಿದ್ದಾರೆ.
9 ವರ್ಷದ ಹೆಣ್ಣು ಮಗಳನ್ನು ತೆಗೆದುಕೊಂಡು ಹೋಗಿ ಜಮೀನನ್ನು ಬರೆಸಿಕೊಂಡರು ಎಂಬ ಆರೋಪವನ್ನು ಚಿಲ್ಲರೆ ಎಂದ ಡಿಕೆಶಿ, ದಾಖಲೆ ಇದ್ದರೆ ಬಿಡುಗಡೆ ಮಾಡಲಿ, ತಪ್ಪು ಮಾಡಿದರೆ ನಾನು ಯಾವುದೇ ಶಿಕ್ಷೆಗೂ ರೆಡಿ ಇದ್ದೇನೆ ಎಂದು ದೇವೇಗೌಡರಿಗೆ ಸವಾಲು ಹಾಕಿದ್ದಾರೆ.
ನಾನು ಏನು ಮೂರ್ಖನಲ್ಲ, ಚಿಲ್ಲರೆ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡಲ್ಲ. ಅದರ ಬಗ್ಗೆ ಇನ್ನೊಂದು ವೇದಿಕೆಯಲ್ಲಿ ಚರ್ಚೆ ಮಾಡೋಣ ಎಂದು ಡಿಕೆಶಿ ಟಾಂಗ್ ಕೊಟ್ಟರು.
ನನ್ನ ಬಗ್ಗೆ ಅವರು ನೆನಪು ಮಾಡಿಕೊಂಡಿದ್ದಕ್ಕೆ ಬಹಳ ಸಂತೋಷ. ಅಂತಹ ದೊಡ್ಡ ವೇದಿಕೆಯಲ್ಲಿ ನನ್ನ ಹೆಸರು ಪಠಣ ಮಾಡಿದ್ದಕ್ಕೆ ಧನ್ಯವಾದ ಎಂದು ಹೇಳಿದರು.
Google News | Join Facebook | Live | 24/7 Help Desk |