ಜನಾರ್ದನ ರೆಡ್ಡಿ ಪಕ್ಷಕ್ಕೆ ಮರಳಿರುವುದು ಸ್ವಾಗತಾರ್ಹ

Mar 25, 2024 - 16:10
 2
Google  News Join WhatsApp Join Telegram Live

Panchayat Swaraj Samachar News Desk.

ಬೆಂಗಳೂರು: ಮೋದಿ ನಾಯಕತ್ವ ಒಪ್ಪಿ ಹೊಸಬರು, ಹಿಂದೆ ಪಕ್ಷ ಬಿಟ್ಟು ಹೋದವರು ಬರ್ತಿದ್ದಾರೆ. ಒಂದು ಕುಟುಂಬದಲ್ಲಿ ಹೊಸದಾಗಿ ಸದಸ್ಯರು ಸೇರ್ಪಡೆಯಾದಾಗ ಮತ್ತು ಹಳಬರು ವಾಪಸ್ ಬಂದಾಗ ಕುಟುಂಬ ಬಲಿಷ್ಠವಾಗುತ್ತದೆ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಬಿಟ್ಟು ಅನೇಕ ಜನ ಬಿಜೆಪಿ ಸೇರ್ಪಡೆ ಆಗ್ತಿದ್ದಾರೆ. ನಿನ್ನೆ ನವೀನ್ ಜಿಂದಾಲ್ ಕೂಡಾ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪಕ್ಷ ಬಿಟ್ಟು ಹೋದವರು ಮತ್ತೆ ಪಕ್ಷ ಸೇರ್ಪಡೆಯಿಂದ ಪಕ್ಷವೂ ಬಲವಾಗುತ್ತದೆ. ನಮ್ಮ ಪಕ್ಷಕ್ಕೆ ಯಾರೇ ಬಂದರು ನಾವು ಸ್ವೀಕಾರ ಮಾಡ್ತೀವಿ ಎಂದು ಜನಾರ್ದನ ರೆಡ್ಡಿ ಅವರ ಸೇರ್ಪಡೆಯನ್ನು ಸ್ವಾಗತಿಸಿದರು. 

ಹಾನಸದಲ್ಲಿ ಯಾವುದೇ ಬಂಡಾಯ ಇಲ್ಲ. ಮೈತ್ರಿಯ ನಿರ್ಧಾರವನ್ನ ಹಿರಿಯ ನಾಯಕರು ಮಾಡಿರೋದು. ರಾಜ್ಯಕ್ಕೆ ಉಪಯೋಗವಾಗುವ ದೃಷ್ಟಿಯಿಂದ ಈ ಮೈತ್ರಿ ಆಗಿರೋದು. ಎರಡು ಪಕ್ಷದ ಕಾರ್ಯಕರ್ತರು ಉತ್ಸಾಹದಿಂದ ಮೈತ್ರಿ ಒಪ್ಪಿದ್ದಾರೆ ಎಂ

ದರು.

Google News Join Facebook Live 24/7 Help Desk

Tags: