ದಾಂಡೇಲಿಯಲ್ಲಿ ಹುಬ್ಬಳ್ಳಿಯ ಒಂದೇ ಕುಟುಂಬದ ಆರು ಮಂದಿ ನೀರು ಪಾಲು
Google News | Join WhatsApp | Join Telegram | Live |
Panchayat Swaraj Samachar News Desk.
ಕಾರವಾರ: ನೀರಿನಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ನೀರುಪಾಲಾದ ಘಟನೆ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಕಾಳಿ ನದಿಯಲ್ಲಿ ನಡೆದಿದೆ.
ಹುಬ್ಬಳ್ಳಿಯ ಈಶ್ವರ ನಗರದ ನಿವಾಸಿಗಳಾದ ನಜೀರ್ ಅಹ್ಮದ್ (40),ಅಲ್ಛೀಯಾ ಅಹ್ಮದ್ (10),ಮೋಹಿನ್ ಅಹ್ಮದ್ (6),ರೇಷಾ ಉನ್ನಿಸಾ (38),ಇಫ್ರಾಅಹ್ಮದ್ (15),ಅಬೀದ್ ಅಹ್ಮದ್ (12) ಮೃತಪಟ್ಟಿದ್ದು ದಡದಲ್ಲಿದ್ದ ಇಬ್ಬರು ಸುರಕ್ಷಿತರಾಗಿದ್ದಾರೆ.
ಮೃತರು ಒಂದೇ ಕಯಟುಂಬದವರಾಗಿದ್ದು ಎಂಟು ಜನರು ವಾಹನ ಮಾಡಿಕೊಂಡು ದಾಂಡೇಲಿ ಭಾಗಕ್ಕೆ ಪ್ರವಾಸ ಬಂದಿದ್ದರು. ಈಜುವ ವೇಳೆ ಮುಳುಗಿ ಸಾವನ್ನಪ್ಪಿದ್ದಾರೆ.
ದಾಂಡೇಲಿ ಪೊಲೀಸರು ಆರು ಜನರ ದೇಹಗಳನ್ನು ಹೊರತೆಗೆದಿದ್ದಾರೆ. ಮೃತ ದೇಹಗಳನ್ನು ದಾಂಡೇಲಿ ಆಸ್ಪತ್ರೆಗೆ ರವಾನಿಸಿದ್ದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆ ಸಂಬಂಧ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Google News | Join Facebook | Live | 24/7 Help Desk |