ನೀತಿ ಸಂಹಿತೆ ಉಲ್ಲಂಘನೆ – ಶ್ರೀನಿವಾಸ ಪೂಜಾರಿಗೆ ಕೋರ್ಟ್‌ ಸಮನ್ಸ್‌

Apr 5, 2024 - 16:13
 62
Google  News Join WhatsApp Join Telegram Live

ನೀತಿ ಸಂಹಿತೆ ಉಲ್ಲಂಘನೆ – ಶ್ರೀನಿವಾಸ ಪೂಜಾರಿಗೆ ಕೋರ್ಟ್‌ ಸಮನ್ಸ್‌

Panchayat Swaraj Samachar News Desk.

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಉಡುಪಿ, ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ.

ಕೋಟಾ ಶ್ರೀನಿವಾಸ ಪೂಜಾರಿ, ಗುರುಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.  

ಮಾರ್ಚ್ 30 ರಂದು ಕಠಪಾಡಿ ಖಾಸಗಿ ಕಾಲೇಜು ಅವರಣದಲ್ಲಿ ಶ್ರೀನಿವಾಸ ಪೂಜಾರಿ ಪ್ರಚಾರ ಭಾಷಣ ಮಾಡಿದ್ದರು. ಚುನಾವಣಾ ಅಧಿಕಾರಿಗಳ ಅನುಮತಿ ಇಲ್ಲದೆ ರಾಜಕೀಯ ಭಾಷಣ ಮಾಡಿದ ಹಿನ್ನಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ಕೋರ್ಟ್‌ಗೆ ಖಾಸಗಿ ದೂರು ದಾಖಲಿಸಲಾಗಿತ್ತು.

ಈ ದೂರಿನ ಹಿನ್ನೆಲೆಯಲ್ಲಿ ಕೋರ್ಟ್‌ ಸಮನ್ಸ್‌ ಜಾರಿ ಮಾಡಿ ಮೇ 27ಕ್ಕೆ ವಿಚಾರಣೆಯನ್ನು ಮುಂದೂಡಿದೆ

Google News Join Facebook Live 24/7 Help Desk

Tags: