ನೀರು ಕೊಡುವವರೆಗೂ ವೋಟ್ ಮಾಡಲ್ಲ: ಬಸವೇಶ್ವರ ಲೇಔಟ್ ನಿವಾಸಿಗಳಿಂದ ಮತದಾನ ಬಹಿಷ್ಕಾರ ಎಚ್ಚರಿಕೆ

Apr 17, 2024 - 17:18
 19
Google  News Join WhatsApp Join Telegram Live

ನೀರು ಕೊಡುವವರೆಗೂ ವೋಟ್ ಮಾಡಲ್ಲ: ಬಸವೇಶ್ವರ ಲೇಔಟ್ ನಿವಾಸಿಗಳಿಂದ ಮತದಾನ ಬಹಿಷ್ಕಾರ ಎಚ್ಚರಿಕೆ

Panchayat Swaraj Samachar News Desk.

ಬೆಂಗಳೂರು: ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಾಗುತ್ತಿದ್ದು, ನೀರಿಗಾಗಿ ಹಾಹಾಕಾರ ಶುರುವಾಗಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ನೀರಿನ ಸಮಸ್ಯೆ ಉದ್ಬವಿಸಿದೆ. ಈ ಹಿನ್ನಲೆ ಎಚ್ಚೆತ್ತ ಯಶವಂತಪುರ ವಿಧಾನಸಭಾ ಕ್ಷೇತ್ರದ ಬಸವೇಶ್ವರ ಲೇಔಟ್ ನಿವಾಸಿಗಳು ಮತದಾನ ಬಹಿಷ್ಕಾರದ ಎಚ್ಚರಿಕೆ‌ ನೀಡಿದ್ದಾರೆ. ನೀರು ಕೊಡುವವರೆಗೂ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಾವ್ಯಾರು ಮತದಾನ ಮಾಡಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಕಳೆದ ಎರಡು ವರ್ಷಗಳಿಂದ ಲೇಔಟ್ಗೆ ಕುಡಿಯಲು ನೀರಿನ ವ್ಯವಸ್ಥೆ ಇಲ್ಲವಂತೆ, ಈ ಬಗ್ಗೆ ಸಾಕಷ್ಟು ಬಾರಿ ಜನಪ್ರತಿನಿಧಿಗಳಿಗೆ ಮತ್ತು ಅಧಿಕಾರಿಗಳಿಗೆ ತಿಳಿಸಿದರೂ ಏನೂ ಪ್ರಯೋಜನವಾಗಿಲ್ಲ. ಈ ಬಾರಿ ಬಿರುಬಿಸಿಲಿಗೆ ಏರಿಯಾದಲ್ಲಿರುವ ಎಲ್ಲಾ ಬೋರ್ವೆಲ್ಗಳು ಬತ್ತಿ ಹೋಗಿದೆ. ಕಳೆದ ವಿಧಾನಸಭಾ ಚುನಾವಣೆ ಸಮಯದಲ್ಲಿ ಮನೆಗಳಿಗೆ ನೀರು ಬಂದಿದ್ದು, ಆಮೇಲೆ ನೀರೇ ಬಂದಿಲ್ಲ.

ಈ ಲೇಔಟ್ನಲ್ಲಿ 500 ಕ್ಕೂ ಹೆಚ್ಚು ಮನೆಗಳಿದ್ದು, 2000 ಕ್ಕೂ ಹೆಚ್ಚು ಮತಗಳಿವೆ. ಕುಡಿಯಲು ನೀರಿಲ್ಲದೆ ಬಾಡಿಗೆ ಮನೆ ನಿವಾಸಿಗಳು ಮನೆ ಖಾಲಿ ಮಾಡಿಕೊಂಡು ಹೋಗುತ್ತಿದ್ದಾರೆ. ಟ್ಯಾಂಕರ್ಗೆ ಹಣ ಕೊಟ್ಟು ನೀರು ತರಿಸಿಕೊಳ್ಳೋಣಾವೆಂದರೆ, ಒನ್ ಟೂ ಡಬಲ್ ಕೇಳುತ್ತಾರೆ. ಈ ಹಿಂದೆ 500 ರಿಂದ 600 ರುಪಾಯಿ ಕೇಳ್ತಿದ್ದ ಟ್ಯಾಂಕರ್ನವರು, ಇದೀಗ 1500 ರಿಂದ 2 ಸಾವಿರ ಕೇಳುತ್ತಿದ್ದಾರೆ. ಇತ್ತ ಕೆಟ್ಟು ಹೋಗಿರುವ ಬೋರ್ವೆಲ್ ಕೂಡ ರಿಪೇರಿ ಮಾಡುತ್ತಿಲ್ಲ. ನಿವಾಸಿಗಳೇ ಬೋರ್ವೆಲ್ ರಿಪೇರಿ ಮಾಡಿಸಿಕೊಳ್ಳುತ್ತೇವೆ ಎಂದರೂ ಕೂಡ ಅಧಿಕಾರಿಗಳು ಅನುಮತಿ ಕೊಡುತ್ತಿಲ್ಲ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದರು.

Google News Join Facebook Live 24/7 Help Desk

Tags: