ನುಡಿದಂತೆ ನಡೆದ ಕಾಂಗ್ರೆಸ್ :ಡಾ. ಅಂಜಲಿ ನಿಂಬಾಳ್ಕರ್

Apr 4, 2024 - 14:56
 2
Google  News Join WhatsApp Join Telegram Live

ನುಡಿದಂತೆ ನಡೆದ ಕಾಂಗ್ರೆಸ್ :ಡಾ. ಅಂಜಲಿ ನಿಂಬಾಳ್ಕರ್

Panchayat Swaraj Samachar News Desk.

ಬೆಳಗಾವಿ: ಬೀಡಿ ಗ್ರಾಮ ಪಂಚಾಯತ್ ವ್ಯಾಪ್ತಿ ಪ್ರದೇಶಗಳಲ್ಲಿ ಉತ್ತರ ಕನ್ನಡ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾದ ಡಾ ಅಂಜಲಿ ನಿಂಬಾಳ್ಕರ್ ಭರ್ಜರಿ ಪ್ರಚಾರ ಹಮ್ಮಿಕೊಂಡಿದ್ದರು. 

ಬೀಡಿ ಗ್ರಾಮದ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಮತ ಕೇಳಿ ಕಾಂಗ್ರೆಸ್ ನುಡಿದಂತೆ ನಡೆದಿದೆ. 5 ಗ್ಯಾರಂಟಿಗಳನ್ನು ಮನೆ ಮನೆಗೆ ತಲುಪುತ್ತವೆ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ 2023 ವಿಧಾನಸಭೆ ಚುನಾವಣೆಯಲ್ಲಿ ಆಶ್ವಾಸನೆ ನೀಡಿದಂತೆ 

5 ಗ್ಯಾರಂಟಿಗಳನ್ನು ಪೂರೈಸಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಆದ ತಕ್ಷಣ ಇನ್ನು ಅನೇಕ ಯೋಜನೆಗಳು ಮತ್ತು ಜನಪರ ಕಾರ್ಯಕ್ರಮಗಳನ್ನು ನಾವು ಹಮ್ಮಿಕೊಳ್ಳಲಿದ್ದೇವೆ.

  ಕಾಂಗ್ರೆಸ್ ಪಕ್ಷ ಎಲ್ಲರನ್ನೂ ಸಮಾನವಾಗಿ ನೋಡುವ ದೇಶದಲ್ಲಿ ಸೌಹಾರ್ದತೆ ಮೂಡಿಸುವ ಕೆಲಸ ಕಾಂಗ್ರೆಸ್ ಪಕ್ಷದ ವಾಗಿದೆ .

ಸಭೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಉಪಸ್ಥಿತರಿದ್ದ ಜನಸಮೂಹಕ್ಕೆ ಡಾ. ಅಂಜಲಿ ನಿಂಬಾಳ್ಕರ ಕಾಂಗ್ರೆಸ್ ಪರವಾಗಿ ಮತ ನೀಡಬೇಕು ಎಂದು ಮನವಿ ಮಾಡಿಕೊಂಡರು.ಈ ಸಂದರ್ಭದಲ್ಲಿ ಖಾನಾಪುರ್ ತಾಲೂಕ ಕಾಂಗ್ರೆಸ ಅಧ್ಯಕ್ಷರಾದ ಮಹದೇವ ಕೋಳಿ, ಬೀಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಕಾಶೀಲಕರ, ಲಿಂಗನಮಠ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕಾಸಿಂ ಹಟ್ಟಿಹೊಳಿ, ಗ್ರಾಮ ಪಂಚಾಯತ್ ಸದಸ್ಯರಾದ ದೀಪಾ ಪಾಟೀಲ, ಗ್ರಾಮೀಣ ಬ್ಲಾಕ್ ಅಧ್ಯಕ್ಷರಾದ ಮಧು ಕೊಳೇಕರ್ , ಮಹಿಳಾ ಘಟಕದ ಗ್ರಾಮೀಣ ಬ್ಲಾಕ್ ಅಧ್ಯಕ್ಷರಾದ ಗೀತಾ ಅಂಬರಗಟ್ಟಿ , ಕಾಂಗ್ರೆಸ್ ಮುಖಂಡರಾದ ಗಂಗಾಧರ ಜವಳಿ, ಚಂಪಣ್ಣ ಹೊಸಮನಿ, ಮುಂತಾದವರು ಉಪಸ್ಥಿತರಿದ್ದರು.

 

Google News Join Facebook Live 24/7 Help Desk

Tags: