ನೇಹಾ ಹತ್ಯೆ ನ್ಯಾಯಕ್ಕಾಗಿ ಕೈಜೋಡಿಸಿದ ನಟ, ನಟಿಯರು

Apr 20, 2024 - 23:21
 6
Google  News Join WhatsApp Join Telegram View ePaper

ನೇಹಾ ಹತ್ಯೆ ನ್ಯಾಯಕ್ಕಾಗಿ ಕೈಜೋಡಿಸಿದ ನಟ, ನಟಿಯರು

Panchayat Swaraj Samachar News Desk.

ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಹತ್ಯೆ ಪ್ರಕರಣ ಸಂಬಂಧ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ. ಈ ಬೆನ್ನಲ್ಲೇ ಕನ್ನಡ ಚಿತ್ರರಂಗ ಕೂಡ ವಿದ್ಯಾರ್ಥಿನಿ ಸಾವಿಗೆ ಮರುಕ ವ್ಯಕ್ತಪಡಿಸಿದೆ. ನಟ- ನಟಿಯರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಳ್ಳುವ ಮೂಲಕ ನೇಹಾ ಹತ್ಯೆಯನ್ನು ಖಂಡಿಸಿದ್ದಾರೆ.

ಇದೀಗ ಪ್ರಕರಣ ಸಂಬಂಧ ನಟ ದರ್ಶನ್‌ ಅವರು ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಳ್ಳುವ ಮೂಲಕ “ಜಸ್ಟೀಸ್ ಫಾರ್ ನೇಹಾ” ಅಭಿಯಾನಕ್ಕೆ ನಟ ಸಾಥ್ ನೀಡಿದ್ದಾರೆ. ಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ. ಇನ್ನು ಬಾಳಿ ಬದುಕಬೇಕಿದ್ದ 23 ವಯಸ್ಸಿನ ನೇಹಾ ಹಿರೇಮಠ್ ರವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದೇವರು ನೀಡಲಿ ಎಂದು ಬರೆದುಕೊಂಡಿದ್ದಾರೆ.

ನಟ ಶಿವರಾಜ್‌ ಕುಮಾರ್‌ ಅವರು ಈ ರೀತಿಯ ಅಮಾನುಷ ಘಟನೆ ಮತ್ತೆಂದೂ ಮರುಕಳಿಸದಿರಲಿ. ಮಗಳನ್ನು ಕಳೆದುಕೊಂಡ ಆ ತಂದೆ-ತಾಯಿಯ ಆಕ್ರಂದನ ನೋಡಲಾಗದು. ನಮ್ಮ ಸರ್ಕಾರ, ನ್ಯಾಯಾಂಗ ವ್ಯವಸ್ಥೆ, ಹಾಗೂ ಪೊಲೀಸ್ ಆದಷ್ಟು ಬೇಗ ನೇಹಾ ಹಿರೇಮಠ್ ಸಾವಿಗೆ ನ್ಯಾಯ ದೊರಕುವಂತೆ ಮಾಡಲಿ ಎನ್ನುವುದು ನನ್ನ ಕಳಕಳಿಯ ವಿನಂತಿ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ನೇಹಾ ಹಿರೇಮಠ್  ಅವರ ಘಟನೆ ಅಮಾನವೀಯವಾಗಿದೆ. ಇಂತಹ ಘಟನೆ ಮರುಕಳಿಸದಂತೆ ಕಾನೂನು ಕ್ರಮಗಳನ್ನು ತಪ್ಪಿತಸ್ಥರ ಮೇಲೆ ಕೈಗೊಳ್ಳಬೇಕೆಂದು ವಿನಂತಿಸುತ್ತಾ, ನೇಹಾ ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ದೇವರು ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂಬುದಾಗಿ ನಟ ರಿಷಬ್‌ ಶೆಟ್ಟಿ ಹಾಗೂ ರಕ್ಷಿತ್‌ ಶೆಟ್ಟಿ  ತಮ್ಮ ಎಕ್ಸ್‌ನಲ್ಲಿ ಬರೆದುಕೊಳ್ಳುವ ಮೂಲಕ #JusticeForNeha ಅಭಿಯಾನಕ್ಕೆ ಕೈಜೋಡಿಸಿದ್ದಾರೆ.

ಒಳ್ಳೇ ಬುದ್ದಿ ಹೇಳಿಕೊಡುವ ವಿದ್ಯಾ ದೇಗುಲವೇ ಕಲುಷಿತವಾಯ್ತು. ಸಮಾಜದಲ್ಲಿ ಬಾಳಿ ಬದುಕಬೇಕಾದ ಒಂದು ಹೆಣ್ಣಿನ ಜೀವ ಮಣ್ಣಾಯ್ತು. ಇದಕ್ಕೆ ಉತ್ತರ ಒಂದೇ …. ” ನ್ಯಾಯ “, ಆ ಕಣ್ಣಿರಿಗೆ ಉತ್ತರ ” ನ್ಯಾಯ ” ಎಂದು ನಟಿ ಅನುಶ್ರೀ ಬೇಸರ ವ್ಯಕ್ತಪಡಿಸಿದ್ದಾರೆ.

Google News Join Facebook Live 24/7 Help Desk

Tags: