ನೇಹಾ ಹಿರೇಮಠ್ ಕೊಲೆ, ಲವ್ ಜಿಹಾದ್ ಅನುಮಾನ, ತನಿಖೆಗೆ ಆಗ್ರಹ
Google News | Join WhatsApp | Join Telegram | Live |
Panchayat Swaraj Samachar News Desk.
ಹುಬ್ಬಳ್ಳಿಯ ಖಾಸಗಿ ಕಾಲೇಜಿನ ಕ್ಯಾಂಪಸ್ನಲ್ಲಿ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹಾಳನ್ನ ಹತ್ಯೆ ಮಾಡಲಾಗಿದೆ. ಪ್ರೀತಿಯ ವಿಚಾರಕ್ಕೆ ಬೆಳಗಾವಿ ಮೂಲದ ಫಯಾಜ್ ಎಂಬಾತ 11 ಬಾರಿ ಇರಿದು ಭೀಕರವಾಗಿ ಕೊಲೆಗೈದಿದ್ದಾನೆ.
ಕೊಲೆಯಾದ ಯುವತಿ ತಂದೆಯನ್ನ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಅರವಿಂದ ಬೆಲ್ಲದ್, ಮಹೇಶ್ ಟೆಂಗಿನಕಾಯಿ ಸೇರಿದಂತೆ ಹಲವು ಬಿಜೆಪಿ ನಾಯಕರು ಭೇಟಿಯಾಗಿದ್ದಾರೆ. ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಅವರಿಗೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಮಗಳ ಸಾವಿಗೆ ನ್ಯಾಯ ಸಿಗಲೇಬೇಕು ಅಂತ ನಿರಂಜನ್ ಹಿರೇಮಠ್ ತಮ್ಮ ಅಳಲನ್ನ ತೋಡಿಕೊಂಡಿದ್ದಾರೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಾಂಗ್ರೆಸ್ನ ಆಡಳಿತದಲ್ಲಿ ಭಯ ಇಲ್ಲದಂತಾಗಿದೆ ಅಂತ ಕಿಡಿಕಾರಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಲಹ್ ಜಿಹಾದ್ ಆಗಿರುವ ಅನುಮಾನ ವ್ಯಕ್ತಪಡಿಸಿದ್ದಾರೆ. ಲವ್ ಮಾಡುತ್ತಿದ್ದೇನೆ ಅಂತಾ ಇದ್ದರೂ ಸಹಿತ ಆಮೇಲೆ ಬೇಡ ಅಂದಿರಬಹುದು. ಅದಕ್ಕೆ ಮರ್ಡರ್ ಮಾಡಬೇಕು ಅಂತಾ ಏನಿದೆ? ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿಯುತ್ತಿದೆ ಎಂದರು. ಅಲ್ಲದೇ ಲವ್ ಜಿಹಾದ್ ಆಯಾಮದಲ್ಲೂ ತನಿಖೆ ಆಗಬೇಕು. ಈ ವಿಚಾರದಲ್ಲೂ ಅತ್ಯಂತ ಗಂಭೀರವಾಗಿ ತನಿಖೆ ಆಗಬೇಕು ಎಂದು ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.
Google News | Join Facebook | Live | 24/7 Help Desk |