ಪೊಲೀಸರ ಮೇಲೆ ನಂಬಿಕೆ ಇಲ್ಲ, ಸಿಬಿಐ ತನಿಖೆಗೆ ನೇಹಾ ತಂದೆ ಆಗ್ರಹಿಸಿದ್ದಾರೆ: ಜೆಪಿ ನಡ್ಡಾ
Google News | Join WhatsApp | Join Telegram | Live |
Panchayat Swaraj Samachar News Desk.
ಹುಬ್ಬಳ್ಳಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ನೇಹಾ ಹಿರೇಮಠ್ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ.
ನೇಹಾ ತಂದೆ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ್ ಹಿರೇಮಠ್ ಮತ್ತು ಗೀತಾ ಅವರನ್ನು ಭಾನುವಾರ ಸಂಜೆ ಭೇಟಿಯಾಗಿ ಮಾತುಕತೆ ನಡೆಸಿದರು. ನಡ್ಡಾ ಜೊತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಶಾಸಕರುಗಳಾದ ಅರವಿಂದ್ ಬೆಲ್ಲದ್, ಮಹೇಶ್ ಟೆಂಗಿನಕಾಯಿ, ಎಂ ಆರ್ ಪಾಟೀಲ್ ಸೇರಿ ವಿವಿಧ ಮುಖಂಡು ನಡ್ಡಾಗೆ ಸಾಥ್ ನೀಡಿದರು.
ಭೇಟಿ ಬಳಿಕ ಮಾತನಾಡಿದ ನಡ್ಡಾ, ಶೋಕತಪ್ತ ಕುಟುಂಬಕ್ಕೆ ಸಾಂತ್ವನ ಹೇಳಲು ಬಂದಿದ್ದೇನೆ. ಬಿಜೆಪಿ, ಇಡಿ ದೇಶ ಅವರ ಕುಟುಂಬದೊಂದಿಗೆ ಇದೆ. ಅವರ ಕುಟುಂಬಕ್ಕೆ ನ್ಯಾಯ ಸಿಗುತ್ತದೆ ಎಂದರು.
ತನಿಖೆಯ ದಾರಿ ತಪ್ಪಿಸಲು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್ ತುಷ್ಟೀಕರಣಕ್ಕಾಗಿ ಈ ರೀತಿ ಹೇಳಿಕೆ ಕೊಟ್ಟಿದ್ದಾರೆ. ಸರ್ಕಾರದ ತುಷ್ಟೀಕರಣವನ್ನು ಜನರು ಕ್ಷಮಿಸುವುದಿಲ್ಲ ಎಂದು ಹೇಳಿದರು.
Google News | Join Facebook | Live | 24/7 Help Desk |