ಬಸ್ ಏರುವ ಮುನ್ನ ಹೃದಯಾಘಾತ.. ಚುನಾವಣಾ ಸಿಬ್ಬಂದಿ ಕುಸಿದು ಬಿದ್ದು ಸಾವು

May 6, 2024 - 12:34
 138
Google  News Join WhatsApp Join Telegram View ePaper

ಬಸ್ ಏರುವ ಮುನ್ನ ಹೃದಯಾಘಾತ.. ಚುನಾವಣಾ ಸಿಬ್ಬಂದಿ ಕುಸಿದು ಬಿದ್ದು ಸಾವು

Panchayat Swaraj Samachar News Desk.

ಬಾಗಲಕೋಟೆ: ಹೃದಯಾಘಾತದಿಂದ ಚುನಾವಣಾ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ ಘಟನೆ ಮುಧೋಳ ನಗರದಲ್ಲಿ ಬೆಳಕಿಗೆ ಬಂದಿದೆ. ಮೃತಪಟ್ಟವರನ್ನು ಗೋವಿಂದಪ್ಪ ಸಿದ್ದಾಪುರ ಎಂದು ಗುರುತಿಸಲಾಗಿದೆ.

ಬಸ್ ನಿಲ್ದಾಣದ ಗೇಟ್ ಬಳಿಯೇ ಗೋವಿಂದಪ್ಪ ಸಿದ್ದಾಪುರ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಚುನಾವಣಾ ಕರ್ತವ್ಯಕ್ಕೆ ತೆರಳಲು ಬಸ್ ಹತ್ತಲು ಬಂದಿದ್ದರು. ಆದರೆ ಬಸ್ ಹತ್ತುವ ಮುನ್ನವೇ ಗೋವಿಂದಪ್ಪ ಸಿದ್ದಾಪುರ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.

ಮೃತಪಟ್ಟ ಗೋವಿಂದಪ್ಪ ಸಿದ್ದಾಪುರ ಸರಕಾರಿ ಪ್ರಾಥಮಿಕ ಶಾಲೆ ಶಿಕ್ಷಕರಾಗಿದ್ದಾರೆ. ಜಮಖಂಡಿ ತಾಲ್ಲೂಕಿನ ಬಿದರಿ ಪ್ರಾಥಮಿಕ ಶಾಲೆ ಶಿಕ್ಷಕರಾಗಿದ್ದಾರೆ. ಜಮಖಂಡಿ ತಾಲ್ಲೂಕಿನ ಮೈಗೂರು ಪ್ರಾಥಮಿಕ ಶಾಲೆ ಮತಗಟ್ಟೆಗೆ ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

Google News Join Facebook Live 24/7 Help Desk

Tags: