ಬಿಜೆಪಿಗೆ ಬಿಗ್ ಶಾಕ್, ಸಂಸದ ಶ್ರೀನಿವಾಸ್ ಪ್ರಸಾದ್ ಅಳಿಯ ಬೆನ್ನಲ್ಲೇ ಈಗ ಸಹೋದರ ಕಾಂಗ್ರೆಸ್ ಸೇರ್ಪಡೆ

Apr 2, 2024 - 22:02
 22
Google  News Join WhatsApp Join Telegram View ePaper

ಬಿಜೆಪಿಗೆ ಬಿಗ್ ಶಾಕ್, ಸಂಸದ ಶ್ರೀನಿವಾಸ್ ಪ್ರಸಾದ್ ಅಳಿಯ ಬೆನ್ನಲ್ಲೇ ಈಗ ಸಹೋದರ ಕಾಂಗ್ರೆಸ್ ಸೇರ್ಪಡೆ

Panchayat Swaraj Samachar News Desk.

ಮೈಸೂರು: ಸಿಎಂ ಸಿದ್ದರಾಮಯ್ಯನವರ ಸೂಚನೆ ಮೇರೆಗೆ ಮೊನ್ನೆ ಅಷ್ಟೇ ಸಚಿವರಾದ ಎಚ್ಸಿ ಮಹದೇವಪ್ಪ, ವೆಂಕಟೇಶ್ ಸೇರಿದಂತೆ ಚಾಮರಾನಗರ ಮತ್ತು ಮೈಸೂರು ಕಾಂಗ್ರೆಸ್ ನಾಯಕರು ಸೇರಿಸಕೊಂಡು ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿ ಮಾಡಿದ್ದರು. ಅಲ್ಲದೇ ಕಾಂಗ್ರೆಸ್ಗೆ ಬೆಂಬಲಿಸುವಂತೆ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಶ್ರೀನಿವಾಸ್ ಪ್ರಸಾದ್ ಅಳಿಯ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅಲ್ಲದೇ ಇದೀಗ ಶ್ರೀನಿವಾಸ್ ಪ್ರಸಾದ್ ಅವರ ಸಹೋದರ ವಿ.ರಾಮಸ್ವಾಮಿ ಸಹ ಕಾಂಗ್ರೆಸ್ ಸೇರ್ಪಡೆಯಾದರು. 

 ಮೈಸೂರಿನಲ್ಲಿ ಇಂದು ವಿ.ರಾಮಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಇದರಿಂದ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಮರ್ಮಾಘಾತವಾಗಿದೆ.

ಕಾಂಗ್ರೆಸ್ ಸೇರಿದ ಬಳಿಕ ಮಾತನಾಡಿದ ರಾಮಸ್ವಾಮಿ, ನಾವೆಲ್ಲರೂ ಪ್ರಾಮಾಣಿಕವಾಗಿ ಸಿದ್ದರಾಮಯ್ಯನವರ ಕೈಬಲಪಡಿಸಬೇಕು.ಆಗ ಸಿಎಂ ಸಿದ್ದರಾಮಯ್ಯಗೆ ಬಲ ಹೆಚ್ಚಾದಷ್ಟು ನಮ್ಮ ಕೈಗೆ ಬಲ ಬರುತ್ತೆ. ಸಿದ್ದರಾಮಯ್ಯ ನಮ್ಮ ಕ್ಷೇತ್ರದವರಾಗಿದ್ದಾರೆ. ನಮ್ಮ ಭಾಗದ ಅಭಿವೃದ್ಧಿಗೆ ಅವರಲ್ಲಿ ಮನವಿ ಮಾಡಿಕೊಳ್ಳಬಹುದು. ನಾವೆಲ್ಲಾ ಪ್ರಾಮಾಣಿಕವಾಗಿ ದುಡಿದು ‘ಕೈ’ ಅಭ್ಯರ್ಥಿ ಗೆಲ್ಲಿಸಬೇಕು. ಆಗ ಮಾತ್ರ ನಾವು ಕಾಂಗ್ರೆಸ್ ಪಕ್ಷ ಸೇರಿದ್ದಕ್ಕೆ ಸಾರ್ಥಕವಾಗುತ್ತದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಬೃಹತ್ ಸಮಾವೇಶ ಮಾಡೋಣ ಎಂದರು.

Google News Join Facebook Live 24/7 Help Desk

Tags: