ಬ್ರಹ್ಮ ಬಂದರೂ ಚುನಾವಣೆಯಿಂದ ಹಿಂದೆ ಸರಿಯುವ ಮಾತಿಲ್ಲ: ಈಶ್ವರಪ್ಪ
Google News | Join WhatsApp | Join Telegram | Live |
Panchayat Swaraj Samachar News Desk.
ಶಿವಮೊಗ್ಗ: ಬ್ರಹ್ಮ ಬಂದರೂ ಬಂಡಾಯ ವಾಪಸ್ ಪಡೆಯುವುದಿಲ್ಲ. ಕೇವಲ ಬಂಡಾಯ ಅಲ್ಲ ಚುನಾವಣೆಯಲ್ಲಿ ಗೆಲ್ಲುತ್ತೇನೆ. ಇದೇ 28ರಂದು ಬೆಳಗ್ಗೆ ನನ್ನ ಚುನಾವಣಾ ಪ್ರಚಾರದ ಕಾರ್ಯಾಲಯ ಉದ್ಘಾಟನೆ ಮಾಡುತ್ತೇನೆ. ಲೋಕಸಭೆ ಚುನಾವಣೆ ಮುಗಿದ ಬಳಿಕ ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗುತ್ತದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಶನಿವಾರ ಮಾಧ್ಯಮಗೋಷ್ಠಿ ಆಯೋಜಿಸಿ ಮಾತನಾಡಿದ ಅವರು, ಶಿವಮೊಗ್ಗಕ್ಕೆ ಬ್ರಹ್ಮ ಬಂದರೂ ಬಂಡಾಯ ವಾಪಸ್ ಪಡೆಯುವುದಿಲ್ಲ. ಕೇವಲ ಬಂಡಾಯ ಅಲ್ಲ ಚುನಾವಣೆಯಲ್ಲಿ ಗೆಲ್ಲುತ್ತೇನೆ. ಮನೆಯಲ್ಲಿ ಒಬ್ಬರು ಕೇಂದ್ರ ಚುನಾವಣಾ ಸಮಿತಿ ಸದಸ್ಯರು (ಬಿ.ಎಸ್.ಯಡಿಯೂರಪ್ಪ), ಒಬ್ಬ ಎಂಪಿ (ಬಿ.ವೈ. ರಾಘವೇಂದ್ರ) ಹಾಗೂ ಮತ್ತೊಬ್ಬ ಎಂಎಲ್ಎ (ಬಿ.ವೈ. ವಿಜಯೇಂದ್ರ). ಜೊತೆಗೆ, ಆರು ತಿಂಗಳು ಹಠ ಹಿಡಿದು ಮಗನನ್ನು ರಾಜ್ಯದ ಬಿಜೆಪಿ ಅಧ್ಯಕ್ಷನಾಗಿ ಮಾಡಿದರು. ರಾಜ್ಯದಲ್ಲಿ ಪ್ರತಾಪ್ ಸಿಂಹ, ಬಸವನಗೌಡ ಪಾಟೀಲ್ ಯತ್ನಾಳ್, ಸಿಟಿ ರವಿ ಹಾಗೂ ಸದಾನಂದ ಗೌಡ ಎಲ್ಲರಿಗೂ ಅಪಮಾನ ಮಾಡಿದ್ದಾರೆ. ಬಿ ವೈ ವಿಜೇಂದ್ರ ರಾಜ್ಯಾಧ್ಯಕ್ಷರಾಗುತ್ತಿದ್ದಂತೆ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದರು ಎಂದು ಕಿಡಿಕಾರಿದರು.
Google News | Join Facebook | Live | 24/7 Help Desk |