ಮಾಜಿ ಶಾಸಕ ಸಂಜಯ್ ಪಾಟೀಲ್ ಅವರಿಗೆ ಎಚ್ಚರಿಕೆ ನೀಡಿದ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ವಿನಯನ ನವಲಗಟ್ಟಿ
Google News | Join WhatsApp | Join Telegram | Live |
Panchayat Swaraj Samachar News Desk.
ಬೆಳಗಾವಿ: ಬಿಜೆಪಿ ನಾಯಕ ಹಾಗೂ ಮಾಜಿ ಶಾಸಕ ಸಂಜಯ್ ಪಾಟೀಲ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಚುನಾವಣಾ ಸಭೆಯಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದು ಇದನ್ನು ಕಾಂಗ್ರೆಸ್ ಪಕ್ಷ ಕಠುವಾಗಿ ಖಂಡಿಸುತ್ತದೆ ಎಂದು ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷರಾದ ವಿನಯ್ ನವಲಗಟ್ಟಿ ಹೇಳಿದರು.
133 ನೆಯ ವಿಶ್ವ ರತ್ನ ಭಾರತ ರತ್ನ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಯ ನಿಮಿತ್ತ ನಗರದ ಅಂಬೇಡ್ಕರ್ ಉದ್ಯಾನದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಮೂರ್ತಿಗೆ ಅಭಿವಾಧನ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಂಬೇಡ್ಕರ್ ವಿಚಾರಗಳು ಸಮಾಜದ ಮತ್ತು ಸಮಾನತೆಯ ಕುರಿತು ಮಾರ್ಗದರ್ಶಕ ವಾಗಿರುತ್ತದೆ ಎಂದರು.
ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡ ಸಂಜಯ್ ಪಾಟೀಲ ಚುನಾವಣಾ ಪ್ರಚಾರ ಸಭೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದು ಅವರಿಗೆ ಶೋಭೆ ತರುವುದಿಲ್ಲ. ಇದೆ ಮೊದಲನೆಯ ಬಾರಿ ಅಲ್ಲ, ಈ ರೀತಿ ಮೂರ್ನಾಲ್ಕು ಬಾರಿ ಹೇಳಿಕೆ ನೀಡಿ ಜನ ಆಕ್ರೋಶಕ್ಕೆ ಗುರಿಯಾಗಿದ್ದಾರೆ . ಇವರ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ ಹಾಗೂ ಖಂಡನೀಯ , ಅತ್ಯಂತ ದುಃಖದಾಯಿ ಸಂಗತಿಯಾಗಿದೆ ಎಂದರು.
ಸಂವಿಧಾನ ವಿರೋಧಿ ಇವರ ಸಂಸ್ಕೃತಿಯಾಗಿದೆ. ನಾವು ಸಂವಿಧಾನದ ಅಡಿಯಲ್ಲಿ ಎಲ್ಲಾ ಸಮಭಾವ ಸಮಾನರು ಎಂದು ಜನಪರ ಕಾರ್ಯಗಳನ್ನು ಮಾಡುತ್ತಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಹಾಗೂ ಮಹಿಳೆಯರ ವಿರುದ್ಧ ಇಂತಹ ಹೇಳಿಕೆ ನೀಡುವುದು ಅವರ ಕೆಳಮಟ್ಟದ ಸಂಸ್ಕೃತಿಯಾಗಿದೆ.
ಸಂಜಯ್ ಪಾಟೀಲ ಅವರಿಗೆ ಇದೆ ಕೊನೆಯ ಅವಕಾಶ ಕಾಂಗ್ರೆಸ್ ಕಾರ್ಯಕರ್ತರು ನೀಡುತ್ತಾ ಇದ್ದಾರೆ. ಇಂತಹ ದುಸ್ಸಾಹಸಕ್ಕೆ ಮತ್ತೆ ಕೈ ಹಾಕಿದರೆ ಇದರ ಪರಿಣಾಮ ಬೇರೆಯಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ವಿಭಾಗ ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅನಂತ್ ಕುಮಾರ್ ಬ್ಯಾಕೋಡ್ ,ಕಾರ್ಮಿಕ ವಿಭಾಗದ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಮಂಜು ಕಾಂಬಳೆ, ರೋಹಿಣಿ ಬಬ್ಸೆಟ, ಶಕೀಲ್ ಮುಲ್ಲ, ಕಾಂಗ್ರೆಸ್ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು
Google News | Join Facebook | Live | 24/7 Help Desk |