ಮಾಜಿ ಸಚಿವ ಸೊಗಡು ಶಿವಣ್ಣ ಅವರು ಬಿಜೆಪಿಗೆ ಮರು ಸೇರ್ಪಡೆ
Google News | Join WhatsApp | Join Telegram | Live |
Panchayat Swaraj Samachar News Desk.
ತುಮಕೂರು: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಅವರು ಭೇಟಿಯಾಗಿ ಮಾತುಕತೆ ನಡೆಸಿದ ಬೆನ್ನಲ್ಲೇ ಮಾಜಿ ಸಚಿವ ಸೊಗಡು ಶಿವಣ್ಣ ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಅಲ್ಲದೆ, ಸೊಗಡು ಶಿವಣ್ಣ ಅವರ ನೇತೃತ್ವದಲ್ಲಿ ಆಯೋಜಿಸಿದ ಸಮಾನ ಮನಸ್ಕರ ಸಮಾರಂಭದಲ್ಲಿ ಸೋಮಣ್ಣ ಮತ್ತು ಸಿಟಿ ರವಿ ಭಾಗಿಯಾದರು.
ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ಗಾಗಿ ಜೆಸಿ ಮಾಧುಸ್ವಾಮಿ ಮತ್ತು ವಿ ಸೋಮಣ್ಣ ನಡುವೆ ಭಾರೀ ಪೈಪೋಟಿ ನಡೆದಿತ್ತು. ಕೊನೆಗೆ ಬಿಜೆಪಿ ಹೈಕಮಾಂಡ್ ಕ್ಷೇತ್ರದಲ್ಲಿ ಸೋಮಣ್ಣ ಅವರಿಗೆ ಮಣೆ ಹಾಕಿದೆ. ಟಿಕೆಟ್ ಕೈತಪ್ಪಿದ ಹಿನ್ನೆಲೆ ಸೋಮಣ್ಣ ಮತ್ತು ಯಡಿಯೂರಪ್ಪ ಮೇಲೆ ಮುನಿಸುಗೊಂಡಿದ್ದರು. ಬಂಡಾಯದ ಗಾಳಿಯೂ ಬೀಸುತಿತ್ತು. ಮಾಧುಸ್ವಾಮಿ ಕಾಂಗ್ರೆಸ್ ಸೇರ್ಪಡೆ ಬಗ್ಗೆಯೂ ಮಾತುಗಳು ಕೇಳಿಬಂದಿದ್ದವು.
ಹೀಗಾಗಿ ಮಾಧುಸ್ವಾಮಿ ಮನವೊಲಿಸಲು ಬಿಜೆಪಿ ನಾಯಕರು ಕಸರತ್ತು ನಡೆಸಿದ್ದರು. ಒಂದೆಡೆ, ಮಾಧುಸ್ವಾಮಿ ಬಣದಲ್ಲಿ ಗುರುತಿಸಿದ್ದ ಸೊಗಡು ಶಿವಣ್ಣ ಅವರ ನಿವಾಸಕ್ಕೆ ಸೋಮಣ್ಣ ಭೇಟಿ ನೀಡಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದ್ದರು. ಇನ್ನೊಂದೆಡೆ, ಯಡಿಯೂರಪ್ಪ ಅವರು ಮಾಧುಸ್ವಾಮಿ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದರು. ತುರುವೇಕೆರೆ ಹೊರವಲಯದಲ್ಲಿರುವ ಮಾಜಿ ಶಾಸಕ ಮಸಾಲ ಜಯರಾಂ ತೋಟದ ಮನೆಯಲ್ಲಿ ನಡೆದ ಸಂಧಾನ ಸಭೆಯಲ್ಲಿ ಮಾಧುಸ್ವಾಮಿ ಅವರನ್ನು ಬಿಎಸ್ವೈ ಸಮಾಧಾನಪಡಿಸುವಲ್ಲಿ ಯಶಸ್ವಿಯಾಗಿದ್ದ
ರು.
Google News | Join Facebook | Live | 24/7 Help Desk |