ರಾಜ್ಯ ಸರ್ಕಾರ ಅಧೋಗತಿಗೆ ಹೋಗಿರುವುದಕ್ಕೆ ಹೋಗಿದ್ದಾರೆ

Mar 27, 2024 - 11:15
 14
Google  News Join WhatsApp Join Telegram Live

ರಾಜ್ಯ ಸರ್ಕಾರ ಅಧೋಗತಿಗೆ ಹೋಗಿರುವುದಕ್ಕೆ ಹೋಗಿದ್ದಾರೆ

Panchayat Swaraj Samachar News Desk.

ಹುಬ್ಬಳ್ಳಿ: ರಾಜ್ಯಕ್ಕೆ ಕೇಂದ್ರದಿಂದ ಯುಪಿಎ ಕಾಲದಲ್ಲಿ ಎಷ್ಟು ಹಾಗೂ ಎನ್‌ಡಿಎ ಕಾಲದಲ್ಲಿ ಎಷ್ಟು ಎನ್‌ಡಿಆರ್‌ಎಫ್ ಹಣ ಬಂದಿದೆ ಎನ್ನುವುದನ್ನು ರಾಜ್ಯ ಸರ್ಕಾರ ಬಹಿರಂಗ ಪಡಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸವಾಲು ಹಾಕಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಧೋಗತಿಗೆ ಹೋಗಿದೆ. ಅದೇ ಕಾರಣಕ್ಕೆ ಸುಪ್ರೀಂಕೋರ್ಟ್‌ಗೆ ಹೋಗಿದ್ದಾರೆ. ಸುಪ್ರೀಂಕೋರ್ಟ್‌ಗೆ ಹೋಗಿರುವುದು ರಾಜಕೀಯ ತಂತ್ರಗಾರಿಕೆ. ರಾಜ್ಯ ಸರ್ಕಾರ ಕೇಂದ್ರದಿಂದ ಹಣ ಬಂದಿಲ್ಲ ಎಂದು ಆರೋಪಿಸುತ್ತಿದೆ. ಅದರ ಬದಲು ಹಿಂದೆ ಎಷ್ಟು ಬಂದಿತ್ತು. ಈಗ ಎಷ್ಟು ಬಂದಿದೆ ಎಂಬುದನ್ನು ಬಹಿರಂಗಪಡಿಸಲಿ ಎಂದರು.

ಮೋದಿ ಮೋದಿ ಎಂದು ಕೂಗುವ ಯುವಕರ ಕಪಾಳಕ್ಕೆ ಹೊಡೆಯಿರಿ ಎಂದು ಸಚಿವ ಶಿವರಾಜ್ ತಂಗಡಗಿ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ ಅವರು, ಇನ್ನು ಸ್ವಲ್ಪ ದಿನ ತಾಳಿ, ಮತಗಳ ಮೂಲಕ ಜನ ಪರೋಕ್ಷವಾಗಿ ಕಾಂಗ್ರೆಸ್‌ಗೆ ಕಪಾಳಕ್ಕೆ ಹೊಡೆಯುತ್ತಾರೆ ಎಂದು ಹೇಳಿದರು.

Google News Join Facebook Live 24/7 Help Desk

Tags: