ಹೆಣದ ಮೇಲೆ ರಾಜಕೀಯ ಮಾಡುವ ಬಿಜೆಪಿ ನಾಯಕರು, ಕಾಂಗ್ರೆಸ್ ಪಕ್ಷದಿಂದ ಅಭಿವೃದ್ಧಿ ಸಾಧ್ಯ

Mar 30, 2024 - 16:01
 16
Google  News Join WhatsApp Join Telegram Live

ಹೆಣದ ಮೇಲೆ ರಾಜಕೀಯ ಮಾಡುವ ಬಿಜೆಪಿ ನಾಯಕರು, ಕಾಂಗ್ರೆಸ್ ಪಕ್ಷದಿಂದ ಅಭಿವೃದ್ಧಿ ಸಾಧ್ಯ

Panchayat Swaraj Samachar News Desk.

ಬೆಳಗಾವಿ : ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ನುಡಿದಂತೆ ನಡೆದಿದೆ. ಪ್ರತಿ ಜನರ ಅಕೌಂಟ್ ಗೆ ಹತ್ತು ಲಕ್ಷ ಹಣ ಹಾಕುವುದಾಗಿ ಹೇಳಿದ್ದ ಪ್ರಧಾನಿ ಮೋದಿ ಮಾತು ತಪ್ಪಿದ್ದಾರೆ. ಜನರ ಒಳಿತಿಗಾಗಿ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಮಹಿಳೆಯರ, ಬಡ ಜನರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. 

ಸವದತ್ತಿ ವಿಧಾನಸಭಾ ಕ್ಷೇತ್ರದ ಹಂಚಿನಾಳ ಗ್ರಾಮದಲ್ಲಿ ಲೋಕಸಭಾ ಚುನಾವಣೆಯ ಪ್ರಚಾರದ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಿಂದ ಮಾತ್ರ ಅಭಿವೃದ್ಧಿ. ಬಿಜೆಪಿಯವರಂತೆ ಮಾತು ತಪ್ಪುವ ಪಕ್ಷ ನಮದಲ್ಲ ಎಂದರು. 10 ಲಕ್ಷ ನೀಡುವುದಾಗಿ ಹೇಳಿದ್ದ ಮೋದಿ, ಒಂದು ಬಿಡಿಗಾಸು ಕೊಟ್ಟಿಲ್ಲ ಎಂದು ಟೀಕಿಸಿದರು.

ಕರೋನಾ ಸಂಕಷ್ಟ, ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನರಿಗೆ ಒಳ್ಳೆಯದು ಮಾಡುವ ಉದ್ದೇಶದಿಂದಲೇ ಕಾಂಗ್ರೆಸ್, ಚುನಾವಣೆಗೂ ಮುನ್ನ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತ್ತು. ಅಧಿಕಾರಕ್ಕೆ ಕೇವಲ 100 ದಿನಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿತು. ನಮ್ಮದು ನಿಜವಾದ ಜನಪರ ಸರ್ಕಾರ ಎಂದು ಹೇಳಿದರು. 400 ರೂಪಾಯಿ ಇದ್ದ ಸಿಲಿಂಡರ್ ಬೆಲೆ 1200 ಏರಿಕೆ ಮಾಡಲಾಯಿತು. ಇಂಥ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳು ಜನರ ಕೈಹಿಡಿದಿವೆ. ಸುಮಾರು 1.18 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡಲಾಗುತ್ತಿದೆ. ಗೃಹಲಕ್ಷ್ಮಿ, ಶಕ್ತಿ‌ ಯೋಜನೆಯಿಂದ ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಣೆ ಯಾಗಿದೆ ಎಂದರು.

ಪುತ್ರ ರಾಜಕೀಯದಲ್ಲಿ ಸಾಕಷ್ಟು ಕಲಿತಿದ್ದಾನೆ. ಕಳೆದ ಹಲವು ವರ್ಷಗಳಿಂದ ಜನಸೇವೆಯಲ್ಲಿ ಗುರುತಿಸಿಕೊಂಡು, ಲೋಕಸಭೆಯಲ್ಲಿ ಸ್ಪರ್ಧಿಸುತ್ತಿದ್ದಾನೆ. ನಿಮ್ಮೆಲ್ಲರ ಪ್ರೀತಿ, ಪ್ರೋತ್ಸಾಹ, ಆಶೀರ್ವಾದ ಪುತ್ರನ ಮೇಲಿರಲಿ ಎಂದು ಕೇಳಿಕೊಳ್ಳುತ್ತೇನೆ ಎಂದರು. 

ಇದೇ ಸಂದರ್ಭದಲ್ಲಿ ಶಾಸಕ ವಿಶ್ವಾಸ ವೈದ್ಯ, ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್, ಶೆಟ್ಟೆಪ್ಪ ನಡಕಟ್ಟಿ, ಕೆ.ಎಸ್.ಗುವನ್ನವರ, ಅಲ್ಲಾಬಿ ಕೆರಿಮನಿ, ಮಲ್ಲು ಜಕಾತಿ, ಡಿ.ಡಿ.ಟೋಪೋಜಿ, ಮಹಾರಾಜಗೌಡ ಪಾಟೀಲ, ರಾಜು ವಕೀಲರು ಹಾಗೂ ಪಕ್ಷದ ಕಾರ್ಯಕರ್ತರು ಇದ್ದರು.

Google News Join Facebook Live 24/7 Help Desk

Tags: