ಹೆಣ್ಣುಮಕ್ಕಳ ಬ್ಯಾಗ್ನಲ್ಲಿ ಸರ್ಕಾರ ಎಕೆ-47 ಗನ್ ಇಡಬೇಕು: ವೀರೇಶ್ವರ ಸ್ವಾಮೀಜಿ
Google News | Join WhatsApp | Join Telegram | Live |
Panchayat Swaraj Samachar News Desk.
ಯಾದಗಿರಿ: ಎಲ್ಲಾ ಹೆಣ್ಣುಮಕ್ಕಳ ಬ್ಯಾಗ್ನಲ್ಲಿ ಸರ್ಕಾರ ಎಕೆ-47 ಗನ್ ಇಡಬೇಕು ಎಂದು ದಾಸವಾಳ ಮಠದ ವೀರೇಶ್ವರ ಸ್ವಾಮಿಜಿ ಹೇಳಿದ್ದಾರೆ.
ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಈ ವೇಳೆ, ಯಾವ ಪೋಷಕರು ಹೆಣ್ಣುಮಕ್ಕಳ ಹಿಂದೆ ರಕ್ಷಣೆಗೆ ಹೋಗಲು ಆಗುವುದಿಲ್ಲ. ಅಲ್ಲದೇ ಶಿಕ್ಷಣ ಸಂಸ್ಥೆಯವರು ಸಹ ಹೆಣ್ಣುಮಕ್ಕಳಿಗೆ ಭದ್ರತೆ ಕೊಡಲು ಆಗುತ್ತಾ? ಹೀಗಾಗಿ ಹೆಣ್ಣುಮಕ್ಕಳಿಗೆ ಸರ್ಕಾರ ದೈಹಿಕ ಸಾಮರ್ಥ್ಯದ ತರಬೇತಿ ಕೊಡಬೇಕು. ಇದಕ್ಕಾಗಿ ಒಂದು ತರಗತಿ ಮೀಸಲಿಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಏನೇ ಮಾಡಿದರೂ ವರ್ಷ ಆರು ತಿಂಗಳು ಜೈಲಿನಲ್ಲಿದ್ದು, ಮತ್ತೆ ಜಾಮೀನಿನ ಮೇಲೆ ಬರ್ತಿವಿ ಎಂದು ದುಷ್ಕೃತ್ಯ ಎಸಗುವ ಆರೋಪಿಗಳಿಗೆ ಮನದಟ್ಟಾಗಿದೆ. ಆರೋಪಿಯನ್ನು ಪೊಲೀಸರು ಹೇಗೆ ಠಾಣೆಗೆ ಕರೆತಂದ್ರೂ ಹಾಗೆ ಸ್ಮಶಾನಕ್ಕೆ ಕರೆದುಕೊಂಡ ಹೋಗಬೇಕು ಎಂದರು.
Google News | Join Facebook | Live | 24/7 Help Desk |